ಶಿವಮೊಗ್ಗ: ನಗರದ ಗೋಪಾಳಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗುವೊಂದು ದಾರುಣವಾಗಿ ಸಾವು ಕಂಡಿರುವ ಘಟನೆ ವರದಿಯಾಗಿದೆ.
ಇದನ್ನೂ ಓದಿ > ಶಿವಮೊಗ್ಗ ಬಸ್ ಸ್ಟ್ಯಾಂಡ್ ಬಳಿ ಸರಣಿ ಅಪಘಾತ, ಕಾರು ಬಸ್ ನಡುವೆ ಸಿಲುಕಿದ ಆಟೋ ನಜ್ಜಗುಜ್ಜು? ಹೇಗಾಯ್ತು ಘಟನೆ?
ಮೃತ ಮಗುವನ್ನು ಗೋಪಾಲಗೌಡ ಬಡಾವಣೆಯ ನಿವಾಸಿ ಮಂಜುನಾಥ್ ಎನ್ನುವವರ ಪುತ್ರ ಆರ್ಯನ್( 1.5 ವರ್ಷ) ಎಂದು ಗುರುತಿಸಲಾಗಿದೆ.
ಘಟನೆ ಹೇಗಾಯ್ತು?
ಮಂಜುನಾಥ್ ಅವರ ಇನ್ನೊಬ್ಬ ಮಗ ಆರುಷ್ ಎನ್ನುವವನು ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾನೆ. ಇಂದು ಮಧ್ಯಾಹ್ನ ಆರುಷ್ ಶಾಲಾ ಬಸ್ನಲ್ಲಿ ಮನೆಗೆ ವಾಪಸ್ ಬಂದಿದ್ದಾನೆ. ಆರುಷ್ನನ್ನು ಮನೆಗೆ ಕರೆತರಲು ಮನೆ ಕೆಲಸದ ಮಹಿಳೆ ಬಸ್ಸಿನಿಂದ ಇಳಿಸಿಕೊಳ್ಳಲು ಹೋಗಿದ್ದರು.
ಕೆಲಸದ ಮಹಿಳೆ ಆರುಷ್ನನ್ನು ಬಸ್ನಿಂದ ಇಳಿಸಿಕೊಳ್ಳುವ ವೇಳೆ ಆರ್ಯನ್ ಬಸ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದನು ಎನ್ನಲಾಗಿದೆ. ಆದರೆ, ಇದನ್ನು ಗಮನಿಸದ ಬಸ್ ಚಾಲಕ ಬಸ್ಸನ್ನು ಚಾಲನೆ ಮಾಡಿದ ಪರಿಣಾಮ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ > ಶಿವಮೊಗ್ಗ ನಗರದ ಪ್ರಮುಖ 14 ಟ್ರಾಫಿಕ್ ಸಿಗ್ನಲ್, ಹಂಪ್ಸ್ಗಳಲ್ಲಿ ಮಿಂಚಲಿವೆ ಸೋಲಾರ್ ಸ್ಟಡ್
ಘಟನೆಯಿಂದ ಮಗುವಿನ ತಲೆ ಹಾಗೂ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆಸ್ಪತ್ರೆ ತಲುಪುವ ವೇಳೆಗಾಗಲೇ ಮಗು ಉಸಿರು ಚೆಲ್ಲಿತ್ತು.
ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.














