ಶಿವಮೊಗ್ಗ: ಸನ್ಯಾಸಿ ಕೋಡಮಗ್ಗಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಗ್ರಾಮ ದತ್ತು ಸ್ವೀಕಾರ ಯೋಜನೆಯಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಬ್ಯಾಂಕ್ನಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆನರಾ ಬ್ಯಾಂಕ್ ಮಣಿಪಾಲ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಗಂಗಾಧರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಹೊಣೆಗಾರಿಕೆಯಲ್ಲಿ ಕೆನರಾ ಬ್ಯಾಂಕ್ ಸದಾ ಮುಂದಿರುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಮನೆ ಮನೆ ಮಾತಾಗಿದೆ. ವಿದ್ಯಾಭ್ಯಾಸಕ್ಕಾಗಿ ನಮ್ಮ ಬ್ಯಾಂಕಿನಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರಿಗೆ ವಿದ್ಯಾ ನಿಧಿಯನ್ನು ನೀಡುತ್ತಾ ಬಂದಿದ್ದು, ಲಾಭದ ಬದಲು ಸಾಮಾಜಿಕವಾಗಿ ಸಾರ್ವಜನಿಕರು ಅಭಿವೃದ್ಧಿ ಹೊಂದಲು ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.
ಇದನ್ನೂ ಓದಿ > ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?
127 ಪ್ರಾದೇಶಿಕ ಕಚೇರಿಗಳಿಂದ 127 ಹಳ್ಳಿಗಳನ್ನು ದತ್ತು ಪಡೆದುಕೊಂಡು 200 ಕೋಟಿ ವೆಚ್ಚದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕೆನರಾ ಬ್ಯಾಂಕ್ ಶ್ರಮಿಸುತ್ತಿದೆ. ಕೆನರಾ ಬ್ಯಾಂಕ್ ಸ್ವಉದ್ಯೋಗ ಪ್ರಾರಂಭಿಸಲು ಸಾರ್ವಜನಿಕರಿಗೆ ಉಚಿತವಾಗಿ ತರಬೇತಿಯನ್ನು ನೀಡಿ ಆರ್ಥಿಕವಾಗಿ ಸಹಾಯವನ್ನು ಸಹ ನೀಡುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರಾದೇಶಿಕ ಕಾರ್ಯಾಲಯದ ಮುಖ್ಯಸ್ಥ ಆರ್ ದೇವರಾಜ್, ವಿಭಾಗೀಯ ವ್ಯವಸ್ಥಾಪಕ ವೀರ ರಾಘವನ್, ಹಿರಿಯ ವ್ಯವಸ್ಥಾಪಕ ಪ್ರಶಾಂತ್ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಕೆನರಾ ಬ್ಯಾಂಕ್ ಉದ್ಯೋಗಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು,














