ತೀರ್ಥಹಳ್ಳಿ: ತೀರ್ಥಹಳ್ಳಿ-ಆಗುಂಬೆ ಮಾರ್ಗದ ನಾಲೂರು ಹೊಸಮನೆ ಸಮೀಪ ಚಲಿಸುತ್ತಿದ್ದ ಡಸ್ಟರ್ ಕಾರೊಂದು ಅಪಘಾತಕ್ಕೀಡಾಗಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಮಂಗಳೂರಿನಿಂದ ಸಾಗರಕ್ಕೆ ವಾಪಸ್ ತೆರಳುತ್ತಿದ್ದ ವೇಳೆ ತಾಂತ್ರಿಕ ದೋಷದಿಂದ ಬ್ರೇಕ್ ಫೇಲ್ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ.
ಇದನ್ನೂ ಓದಿ > ರೈತರೇ ಗಮನಿಸಿ, ಇನ್ಮುಂದೆ ಮುಂದೆ ಯೂರಿಯಾ ರಸಗೊಬ್ಬರ ಖರೀದಿಗೆ ಎಫ್ಐಡಿ ಸಂಖ್ಯೆ ಕಡ್ಡಾಯ
ಈ ರಭಸಕ್ಕೆ ಕಾರಿನಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡು ಧಗಧಗನೆ ಉರಿದಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಚಾಲಕ ಸಮಯ ಪ್ರಜ್ಞೆಯಿಂದ ಕೂಡಲೇ ಹೊರಬಂದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರಿಗೆ ಹತ್ತಿದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.














