ತೀರ್ಥಹಳ್ಳಿ : ಕುಟುಂಬಸ್ಥರು ಮದುವೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಗುತ್ತೆಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ತೂದೂರು ಸಮೀಪದ ಗುತ್ತಿಯಡೇಹಳ್ಳಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಸುಮಾರು 25 ಲಕ್ಷ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ > ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾವು
ಮದುವೆ ಕಾರ್ಯಕ್ರಮಕ್ಕೆ ಕುಟುಂಬದವರು ತೆರಳಿರುವ ಸಂದರ್ಭವನ್ನು ಗಮನಿಸಿರುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣವನ್ನು ಕದ್ದೊಯ್ದಿದ್ದು, ಸುಮಾರು 25 ಲಕ್ಷ ರೂ ವೆಚ್ಚದ ಆಭರಣಗಳು ಕಳ್ಳತನ ಆಗಿದೆ ಎಂದು ಅಂದಾಜಿಸಲಾಗಿದೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ಸ್ವಯಂಗಣತಿ ಅಂತ್ಯ, ಇಂದಿನಿಂದ ಮನೆಗಣತಿ ಆರಂಭ














