ಶಿವಮೊಗ್ಗ: ನಿನ್ನೆ ಸಂಜೆ ಸುರಿದ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಿಂದಾಗಿ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಹೊಳೆಹೊನ್ನೂರು, ಹೊಳಲೂರು, ಆನವೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಇದನ್ನೂ ಓದಿ > ಮಹಿಳಾ ಮೀಸಲಾತಿ ಮಸೂದೆಯನ್ನು ಸೋಲಿಸಿದ್ದೇ ಬಿಜೆಪಿ, ರಾಜ್ಯ ಕೆಪಿಸಿಸಿ ವಕ್ತಾರೆ ಭವ್ಯ
ಮಲ್ಲಿಗೇನಹಳ್ಳಿ, ಮೈದೊಳಲು, ಅಗರದಹಳ್ಳಿ, ಗುಡುಮಗಟ್ಟೆ, ಮಂಗೋಟೆ, ನಾಗಸಮುದ್ರ ಸೇರಿದಂತೆ ಹಲವು ಗ್ರಾಮಗಳಲ್ಲಿ ಬಿರುಗಾಳಿ ಮಳೆಯಿಂದ ತೋಟಗಳಲ್ಲಿ ಭಾರೀ ಪ್ರಮಾಣದ ಅಡಕೆ, ತೆಂಗಿನಮರಗಳು ಉರುಳಿ ಬಿದ್ದಿವೆ. ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಎಲ್ಲೆಂದರಲ್ಲಿ ಮರಗಳು ಉರುಳಿ ಬಿದ್ದಿರುವುದರಿಂದ ವಿದ್ಯುತ್ ಕಂಬಗಳಿಗೆ ಹಾನಿಯಾಗಿವೆ.
ಇದನ್ನೂ ಓದಿ > ಗೋವರ್ಧನ ಟ್ರಸ್ಟ್ನಿಂದ ಗೋವುಗಳ ಸೇವೆಗೆ ಆಂಬುಲೆನ್ಸ್ ಸಮರ್ಪಣೆ, ಕೆ.ಈ. ಕಾಂತೇಶ್
ಶಿವಮೊಗ್ಗದ ವಿದ್ಯಾನಗರದಲ್ಲಿ ಸಿಡಲು ಬಡಿದು ತೆಂಗಿನ ಮರದಲ್ಲಿ ಬೆಂಕಿ ಹೊತ್ತಿತ್ತು. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದರು.














