ಸಾಗರ: ಸಾಗರ ನಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೋರ್ವರ ಬಂಗಾರದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಮಹಿಳೆಯೋರ್ವರನ್ನು ಸಾಗರ ಪಟ್ಟಣ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಕೆಹೆಚ್’ಬಿ ಕಾಲೋನಿ ನಿವಾಸಿ ಸುಮಿತ್ರ (43) ಬಂಧಿತ ಆಪಾದಿತೆ ಎಂದು ಗುರುತಿಸಲಾಗಿದೆ. 12 ಗ್ರಾಂ ತೂಕದ 1.20 ಲಕ್ಷ ರೂ. ಮೌಲ್ಯದ ಕಳವು ಮಾಡಿದ್ದ ಬಂಗಾರದ ಸರವನ್ನು ಆಪಾದಿತೆಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ > ಹೊಳೆಹೊನ್ನೂರು, ಬೈಪಾಸ್ ರಸ್ತೆಯಲ್ಲಿ ಗಾಂಜಾ ಮಾರಾಟ, 5 ಜನರ ಬಂಧನ!
ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ. ಬೆನಕಪ್ರಸಾದ್ ಎನ್ ಜೆ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಪುಲ್ಲಯ್ಯ ರಾಥೋಡ್ ನೇತೃತ್ವದಲ್ಲಿ ಪಿಎಸ್ಐ ಶಾಂತರಾಜ್ ಜೆ ಹೆಚ್ ಹಾಗೂ ಸಿಬ್ಬಂದಿಗಳಾದ ಮಎಎಸ್ಐ ಮೀರಾಬಾಯಿ, ಹೆಚ್.ಸಿ ಸನಾವುಲ್ಲ, ಹೆಚ್.ಸಿ ಫೈರೋಜ್, ಪಿಸಿಗಳಾದ ವಿಶ್ವನಾಥ, ಕೃಷ್ಣಮೂರ್ತಿ, ಲೋಕೇಶ್ ರವರು ಆಪಾದಿತೆಯನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಮಂಗಳಮುಖಿಯ ದರೋಡೆ, 12 ಗಂಟೆಯಲ್ಲಿ ಆರೋಪಿಯ ಬಂಧನ
ಪ್ರಕರಣದ ವಿವರ: ಜಯಮ್ಮ ಎಂಬುವರು ಮಾರಿಕಾಂಬ ಜಾತ್ರೆಯ ಪ್ರಯುಕ್ತ ಸಾಗರದ ಸಂಬಂಧಿಕರ ಮನೆಗೆ ಆಗಮಿಸಿ, 06/02/2026 ರಂದು ತಮ್ಮ ಊರಿಗೆ ಹಿಂದಿರುಗಲು ಸಾಗರದ ಕೆಎಸ್ಆರ್’ಟಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು.
ಬಸ್ ಹತ್ತುವ ವೇಳೆ ಅವರ ಬ್ಯಾಗ್ ನಲ್ಲಿದ್ದ 12 ಗ್ರಾಂ ತೂಕದ ಬಂಗಾರದ ಚೈನ್ ಸರ ಕಳುವಾಗಿತ್ತು.
ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.















