• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 20, 2026
in ಸಾಗರ
ಏಸೂರು ಕೊಟ್ಟರೂ ಬೇಸೂರು ಕೊಡೆವು, ಪಾದಯಾತ್ರೆ ಅಭೂತಪೂರ್ವ ಯಶಸ್ಸು! ಯಾರೆಲ್ಲಾ ಭಾಗವಹಿಸಿದ್ದರು?
Share on FacebookShare on TwitterShare on WhatsApp

ಸಾಗರ : ಬೇಸೂರಿನಲ್ಲಿ ಪ್ರಸ್ತಾವಿತ ಅಣು ವಿದ್ಯುತ್ ಸ್ಥಾವರ ವಿರೋಧಿಸಿ ಬುಧವಾರ ಮಲೆನಾಡು ಅಣು ವಿದ್ಯುತ್ ಸ್ಥಾವರ ಕರೆ ಕೊಟ್ಟಿದ್ದ 25 ಕಿ.ಮೀ. ಪಾದಯಾತ್ರೆ ಅಭೂತಪೂರ್ವ ಯಶಸ್ಸು ಕಂಡಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಧಣಿವರಿಯದೆ 25ಕಿ.ಮೀ. ನಡೆದು ಬಂದು ಏಸೂರು ಕೊಟ್ಟರೂ ಬೇಸೂರು ಕೊಡೆವು ಎಂದು ಘೋಷಣೆ ಕೂಗಿ ಅಣು ಸ್ಥಾವರ ಪ್ರಸ್ತಾವನೆಯನ್ನು ಲಿಖಿತ ರೂಪದಲ್ಲಿ ರದ್ದುಪಡಿಸಿದ್ದೇವೆ ಎಂದು ಆದೇಶ ಹೊರಡಿಸಲು ಒತ್ತಾಯಿಸಿದರು.

ಬೇಸೂರಿನಿಂದ ಪಾದಯಾತ್ರೆಗೆ ಚಾಲನೆ

ಬೇಸೂರು ಬಸವಣ್ಣ ದೇವಸ್ಥಾನದಿಂದ ಬೆಳಿಗ್ಗೆ 9ಕ್ಕೆ ಗಂಟೆಗೆ ಪಾದಯಾತ್ರೆಗೆ ತಾಳಗುಪ್ಪ ಕೂಡ್ಲಿಮಠದ ಶ್ರೀಗಳು ಮತ್ತು ಮೂಲೆಗದ್ದೆ ಮಠದ ಶ್ರೀಗಳು ಚಾಲನೆ ನೀಡಿ, ಯಾವುದೇ ಕಾರಣಕ್ಕೂ ಮಲೆನಾಡು ಭಾಗದಲ್ಲಿ ಅಣು ವಿದ್ಯುತ್ ಸ್ಥಾವರ ಬೇಡ. ಪ್ರಸ್ತಾಪಿತ ಯೋಜನೆಯನ್ನು ರದ್ದುಪಡಿಸಿ ಎಂದು  ಒತ್ತಾಯಿಸಿದರು.

ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ 

ಪ್ರಸ್ತಾಪಿತ ಅಣು ವಿದ್ಯುತ್ ಸ್ಥಾವರ ಯೋಜನೆ ವಿರುದ್ದ ಹಮ್ಮಿಕೊಂಡಿದ್ದ ಪಾದಯಾತ್ರೆ ಸಾಗಿ ಬರುವ ಗ್ರಾಮಗಳಲ್ಲಿ ಅಭೂತಪೂರ್ವವಾದ ಬೆಂಬಲ ದೊರೆಯಿತು. ಗ್ರಾಮಸ್ಥರು ತಮ್ಮೂರಿಗೆ ಪಾದಯಾತ್ರೆ ಬಂದಾಗ ಘೋಷಣೆ ಮೂಲಕ ಸ್ವಾಗತಿಸಿ, ಪಾದಯಾತ್ರೆ ಜೊತೆ ಹೆಜ್ಜೆಹಾಕುತ್ತಿದ್ದ ದೃಶ್ಯ ಕಂಡು ಬಂದಿತ್ತು. ಕೆಲವು ಗ್ರಾಮಗಳಲ್ಲಿ ಮಕ್ಕಳು ಸಹ ಪಾದಯಾತ್ರೆ ಜೊತೆ ಸಾಗಿ ಬಂದಿದ್ದು ವಿಶೇಷವಾಗಿತ್ತು. ಪಾದಯಾತ್ರೆಯಲ್ಲಿ ಬರುತ್ತಿದ್ದವರಿಗೆ ಗ್ರಾಮಗಳಲ್ಲಿ ಕುಡಿಯುವ ನೀರು, ಮಜ್ಜಿಗೆ, ಉಪಹಾರ ಕೊಡುವ ಮೂಲಕ ಸಹಕಾರ ನೀಡಿದರು.

ಹೋರಾಟಕ್ಕೆ ಸಂಪೂರ್ಣ ಬೆಂಬಲ

ಲಿಂಗನಮಕ್ಕಿ ಜಲಾಶಯ ಸಂದರ್ಭದಲ್ಲಿ ಜಮೀನು ಕಳೆದುಕೊಂಡವರಿಗೆ ಇನ್ನೂ ಹಕ್ಕುಪತ್ರ ನೀಡಿಲ್ಲ. ಇದು ರೈತರ ಉಳಿವಿಗಾಗಿ ನಡೆಯುತ್ತಿರುವ ಪಕ್ಷಾತೀತ ಹೋರಾಟವಾಗಿದೆ. ಬೇಸೂರು ಅಣು ವಿದ್ಯುತ್ ಸ್ಥಾವರ ಬೇಡ ಎಂದು ಕೇಂದ್ರಕ್ಕೆ ನಾನು ಮನವಿ ಮಾಡುತ್ತೇನೆ. ಅದೇ ರೀತಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ರಾಜ್ಯದ ಮೇಲೆ ಒತ್ತಡ ತರಲಿ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ತರದಂತೆ ನಿಮ್ಮ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇನೆ.

                                                                                                     -ಬಿ.ವೈ.ರಾಘವೇಂದ್ರ, ಸಂಸದರು

ಬೇಸೂರಿನಲ್ಲಿ ಅಣು ಸ್ಥಾವರಕ್ಕೆ ಬಿಡಲ್ಲ

ಸಂಸದರು ಕೇಂದ್ರದ ಹಂತದಲ್ಲಿ ಅಣು ವಿದ್ಯುತ್ ಸ್ಥಾವರ ಮಾಡಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಮೇಲೆ ಸಹ ನಾನು ಯೋಜನೆಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದು, ನನ್ನ ಶಾಸಕತ್ವ ಹೋದರೂ ಚಿಂತೆಯಿಲ್ಲ. ರೈತರ ಪರವಾಗಿ ಯೋಜನೆ ವಿರುದ್ದ ಹೋರಾಟ ಮಾಡುತ್ತೇನೆ. ಇಲ್ಲಿ ರಾಜಕೀಯ ಮುಖ್ಯವಲ್ಲ, ಪ್ರಸ್ತಾಪಿತ ಯೋಜನೆ ಜಾರಿಗೆ ತರಲು ಬಿಡುವುದಿಲ್ಲ.

                                                                                                        -ಗೋಪಾಲಕೃಷ್ಣ ಬೇಳೂರು, ಶಾಸಕರು

ಸಂಘಟನಾ ಶಕ್ತಿ ಕಾಪಾಡಿಕೊಳ್ಳಬೇಕು 

ಯಾವ ಕಾರಣಕ್ಕೂ ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಅವಕಾಶ ಕೊಡೋಣ ಎಂದು ಒಕ್ಕೊರಲಿನ ಧ್ವನಿ ಎತ್ತೋಣ. ನಾಡನ್ನು ಕಾಪಾಡಿಕೊಳ್ಳುವುದು ಎಲ್ಲರ ಕರ್ತವ್ಯ. ಸಂಕುಚಿತ ಭಾವನೆಗೆ ಅವಕಾಶ ಕೊಡದಂತೆ ಇಡೀ ಮಲೆನಾಡಿನ ಜನರು ಒಗ್ಗಟ್ಟಾಗಿ ವಿದ್ಯುತ್ ಸ್ಥಾವರ ವಿರುದ್ದದ ಕೂಗು, ಆತ್ಮ ನಿವೇದನೆಯನ್ನು ಸರ್ಕಾರಕ್ಕೆ ಮಾಡಿಕೊಳ್ಳಬೇಕು. ಜನರ ಹಿತಕ್ಕಾಗಿ ಯೋಜನೆ ಬೇಕೆ ವಿನಃ, ಜನೋಪಯೋಗಿ ಯೋಜನೆ ಬೇಕು. ಆದರೆ ಮಾರಕವಾಗಬಾರದು, ಪೂರಕವಾಗಿರಬೇಕು.

                                                           -ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು

ಬೇಸೂರಿನಲ್ಲಿ ಅಣು ಸ್ಥಾವರಕ್ಕೆ ಒಪ್ಪಿಗೆ ನೀಡಿಲ್ಲ

ಬೇಸೂರಿನಲ್ಲಿ ಅಣು ವಿದ್ಯುತ್ ಸ್ಥಾವರಕ್ಕೆ ಜಿಲ್ಲಾಡಳಿತದಿಂದ ಯಾವುದೇ ಪರವಾನಿಗೆ ನೀಡಿಲ್ಲ. ಮೌಖಿಕ ಚರ್ಚೆ ನಡೆದಿದೆಯೆ ವಿನಃ, ಲಿಖಿತ ರೂಪದಲ್ಲಿ ಯಾರೂ ಕೇಳಿಲ್ಲ, ನಾವು ಕೊಟ್ಟಿಲ್ಲ. ಎನ್.ಟಿ.ಪಿ.ಸಿ. ಕೆಲವು ಪ್ರದೇಶಗಳ ಬಗ್ಗೆ ಮಾಹಿತಿ ಕ್ರೋಢಿಕರಣಕ್ಕಾಗಿ ಕಂದಾಯ ಇಲಾಖೆಯಿಂದ ಮಾಹಿತಿ ಕೇಳಿದ್ದರು ಬಿಟ್ಟರೇ ಸರ್ಕಾರದಿಂದ ಅಧಿಕೃತವಾಗಿ ಜಾಗ ಗುರುತಿಸಿ ಕಳಿಸಿ ಎಂದು ಕೇಳಿಲ್ಲ. ಸರ್ಕಾರದಲ್ಲಿ ಯಾವುದೇ ರೀತಿಯ ಪ್ರಸ್ತಾವನೆ ಇಲ್ಲ.

                                                                                                     -ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ

 

ಸಹಸ್ರಾರು ಸಂಖ್ಯೆಯಲ್ಲಿದ್ದೇವೆ

ಬೇಸೂರು ಅಣು ವಿದ್ಯುತ್ ಸ್ಥಾವರಕ್ಕೆ ಸಹಸ್ರಾರು ಜನರ ಬೆಂಬಲ ಸಿಕ್ಕಿದ್ದು ತುಂಬಾ ಸಂತೋಷ ತಂದಿದೆ. ಪಾದಯಾತ್ರೆ ನಂತರ ಸರಣಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸರ್ಕಾರ ಪ್ರಸ್ತಾಪಿತ ಯೋಜನೆ ಕೈಬಿಡದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ.

                                                                               -ಬೇಸೂರು ಇಂದೂಧರ , ಹೋರಾಟ ಸಮಿತಿ ಅಧ್ಯಕ್ಷ 

ಪ್ರತಿಭಟನೆಯಲ್ಲಿ ಮೂಲೆಗದ್ದೆ ಮಠದ ಅಭಿನವ ಚನ್ನಬಸವ ಸ್ವಾಮಿಗಳು, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ರಂಗಕರ್ಮಿ ಕೆ.ವಿ.ಅಕ್ಷರ, ಪ್ರಮುಖರಾದ ಪ್ರಸನ್ನ ಕೆರೆಕೈ, ತೀ.ನ.ಶ್ರೀನಿವಾಸ್, ಮಲ್ಲಿಕಾರ್ಜುನ ಹಕ್ರೆ, ಮೈತ್ರಿ ಪಾಟೀಲ್, ದಿನೇಶ್ ಶಿರವಾಳ, ಸೀತಾರಾಮ ಕುರುವರಿ, ನಾಗೇಂದ್ರ ಸಾಗರ್, ಕೆ.ಜಿ.ಪ್ರಶಾಂತ್, ನವೀನ್ ಕೆ.ವಿ., ಅಖಿಲೇಶ್ ಚಿಪ್ಪಳಿ, ಶ್ಯಾಮಲಾ ದೇವರಾಜ್, ನಾಗರಾಜ್ ಈ., ಅಶೋಕ ಬೇಳೂರು ಇನ್ನಿತರರು ಹಾಜರಿದ್ದರು.

Tags: Even if you give Esurkannada newslatest newsmalnad newsSAGARANEWSshimogashivamoggathe 25 km. hiking trip was an unprecedented successwho all participated?you will not give Besurಶಿವಮೊಗ್ಗ
Previous Post

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಶಿವಮೊಗ್ಗ ವಕೀಲರ ನಿಯೋಗ ಸಿಎಂಗೆ ಮನವಿ, ಮನವಿ ಪತ್ರದಲ್ಲೇನಿದೆ?

Next Post

ಭಾರೀ ಮಳೆ ಗಾಳಿ, ಚಾವಣಿ ಕುಸಿದು ವ್ಯಕ್ತಿ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಭಾರೀ ಮಳೆ ಗಾಳಿ, ಚಾವಣಿ ಕುಸಿದು ವ್ಯಕ್ತಿ ಸಾವು!

ಭಾರೀ ಮಳೆ ಗಾಳಿ, ಚಾವಣಿ ಕುಸಿದು ವ್ಯಕ್ತಿ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL