ಬೆಂಗಳೂರು: ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಆರ್ ಹಿತೇಂದ್ರ ನೇತೃತ್ವದ ಕರ್ನಾಟಕ ಜೈಲು ಸುಧಾರಣೆಗಳ ಕುರಿತಾದ ಉನ್ನತ ಮಟ್ಟದ ಸಮಿತಿಯು ಬುಧವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ತನ್ನ ವರದಿಯನ್ನು ಸಲ್ಲಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ರಾಜ್ಯದ ಜೈಲುಗಳಲ್ಲಿನ ಕಾನೂನುಬಾಹಿರ ಚಟುವಟಿಕೆಗಳು, ಭದ್ರತಾ ಕ್ರಮಗಳು ಮತ್ತು ಸುಧಾರಣಾ ಕ್ರಮಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸುಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿತೇಂದ್ರ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದೆ. ನಾನು ಅದರ ಬಗ್ಗೆ ಚರ್ಚಿಸುತ್ತೇನೆ ಮತ್ತು ಅಗತ್ಯವಿದ್ದರೆ ಅದನ್ನು ಸಚಿವ ಸಂಪುಟಕ್ಕೆ ಸಲ್ಲಿಸುತ್ತೇನೆ. ಕೆಲವು ಶಿಫಾರಸುಗಳನ್ನು ಮಾಡಲಾಗಿದೆ, ಅದನ್ನು ನಾನು ಮುಖ್ಯಮಂತ್ರಿಯೊಂದಿಗೆ ಪರಿಶೀಲಿಸುತ್ತೇನೆ ಎಂದು ಅವರು ಹೇಳಿದರು.













