ಶಿವಮೊಗ್ಗ: ತಾಲೂಕಿನ ಹಾಡೋನಹಳ್ಳಿ ಬಳಿ ತುಂಗಭದ್ರಾ ನದಿಯಲ್ಲಿ ಮರಳು ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದ ಪ್ರದೇಶದಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದ ತಂಡ ದಾಳಿ ನಡೆಸಿ ಅಂದಾಜು 80 ಲೋಡ್ ಮರಳನ್ನು ವಶಪಡಿಸಿಕೊಂಡಿದೆ.
ರಾತ್ರಿ ವೇಳೆ ನದಿಯ ಒಡಲಿನಿಂದ ಮಣ್ಣು ತೆಗೆದು ವಾಶ್ ಮೂಲಕ ಮರಳು ಬೇರ್ಪಡಿಸುವ ಅಕ್ರಮ ಚಟುವಟಿಕೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ > ಶಿವಮೊಗ್ಗ, ಶಿವಪ್ಪನಾಯಕ ವೃತ್ತದಲ್ಲಿ ಟೈರ್ ಗೆ ಬೆಂಕಿಹಚ್ಚಿ ಆಕ್ರೋಶ
ಹಾಡೋನಹಳ್ಳಿ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈ ರೀತಿಯ ಮರಳು ಅಕ್ರಮ ಗಣಿಗಾರಿಕೆ ಬಹಳ ಕಾಲದಿಂದ ನಡೆಯುತ್ತಿದ್ದು, ಅಧಿಕಾರಿಗಳು ಮೇಲಿಂದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತಿಲ್ಲ ಎನ್ನಲಾಗಿದೆ.
ಇದನ್ನೂ ಓದಿ > ಸುತ್ತುಕೋಟೆ ಬಳಿ ಬಸ್ -ಬೈಕ್ ನಡುವೆ ಭೀಕರ ಅಪಘಾತ, ಓರ್ವ ಸಾವು
ಮರಳನ್ನು ನದಿಯಲ್ಲೇ ಬಿಡಲಾಗಿದ್ದು, ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಭೂ-ವಿಜ್ಞಾನಿ ಪ್ರಿಯಾ, ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.














