ಶಿವಮೊಗ್ಗ: ಗುಜರಾತ್ ವಿರುದ್ಧ ಐದು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಆರ್ಸಿಬಿ ಅಭಿಮಾನಿಗಳಿಂದ ಗೋಪಿವೃತ್ತದಲ್ಲಿ, ಎಎ ವೃತ್ತದಲ್ಲಿ ನಡೆದ ಗೆಲುವಿನ ಸಂಭ್ರಮಾಚರಣೆ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.
ಆರ್ಸಿಬಿ ಪಂದ್ಯ ಗೆಲ್ಲುತ್ತಿದ್ದಂತೆ ಗೋಪಿ ವೃತ್ತದಲ್ಲಿ ಹಾಗೂ ಎಎ ವೃತ್ತದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಬೈಕ್ ಜಾಥಾ ಮಾಡುವ ಮೂಲಕ ವಿಜಯೋತ್ಸವ ಆಚರಿಸಿದರು.
ಐಪಿಎಲ್ ಫೈನಲ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಗೋಪಿವೃತ್ತದಲ್ಲಿ, ಎ.ಎ. ವೃತ್ತದಲ್ಲಿ ಮುಂಜಾಗ್ರತೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕೆಲವರು ಪಟಾಕಿ ಸಿಡಿಸಿದರು. ಇದೇ ವೇಳೆ ಕೆಲವು ಯುವಕರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು, ಬಸ್ಗಳನ್ನು ತಡೆದು ಸಂಭ್ರಮಾಚರಣೆಗೆ ಮುಂದಾದರು.
ಸಂಚರಿಸುತ್ತಿದ್ದ ಬಸ್ಸುಗಳು, ವಾಹನಗಳನ್ನು ತಡೆಯದಂತೆ ಪೊಲೀಸರು ಎಚ್ಚರಿಸಿದರು. ಆದರೆ ಕೆಲವು ಯುವಕರು ಇದನ್ನು ಮೀರಿ ರಸ್ತೆ ತಡೆದು ಕುಣಿಯಲು ಆರಂಭಿಸಿದರು. ಈ ವೇಳೆ ಪೊಲೀಸರು ಯುವಕರನ್ನು ರಸ್ತೆಯಿಂದ ಸೈಡಿಗೆ ಸರಿಸಲು ಯತ್ನಿಸಿದರು. ಆಗ ನೂಕಟ ತಳ್ಳಾಟವಾಯಿತು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಗುಂಪು ಚದುರಿಸಿದರು.
ಇದನ್ನೂ ಓದಿ > ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಅಕ್ಕಿ, ಅಧಿಕಾರಿಗಳ ದಾಳಿ!
ಇದನ್ನೂ ಓದಿ > ಶಿವಮೊಗ್ಗ, 25 ಕಡೆ ಅಕ್ರಮ ಮರಳು ಅಡ್ಡೆಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ!
ಇದನ್ನೂ ಓದಿ > ಶಿವಮೊಗ್ಗ, 7 ಲಕ್ಷ ರೂ ನಗದು ಕದ್ದಿದ್ದ ಇಬ್ಬರು ಕಳ್ಳರ ಬಂಧನ














