ಶಿಕಾರಿಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿರುವ ಐದು ಯೋಜನೆಗಳನ್ನು ಇಡೀ ವಿಶ್ವದ ಆರ್ಥಿಕ ತಜ್ಞರು ಕೊಂಡಾಡಿದ್ದಾರೆ. ಅಲ್ಲದೆ ಅವುಗಳು ಜನಪರ ಆಗಿರುವ ಕಾರಣಕ್ಕೆ ದೇಶದ ಎಲ್ಲ ರಾಜ್ಯದಲ್ಲೂ ಅಧಿಕಾರ ಹಿಡಿಯುವ ಸಾಧನವಾಗಿದ್ದು, ಎಲ್ಲ ಪಕ್ಷಗಳೂ ಜನಪರ ಯೋಜನೆ ನೀಡುವುದಕ್ಕೆ ಅವರು ಕಾರಣರಾಗಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಗೋಣಿ ಮಾಲತೇಶ್ ಹೇಳಿದರು.
ಸಿದ್ದರಾಮಯ್ಯ ಅವರು ದಾಖಲೆ ಅವಧಿಗೆ ಮುಖ್ಯಮಂತ್ರಿ ಹುದ್ದೆ ನಿರ್ವಹಿಸಿದ ಕಾರಣಕ್ಕೆ ಪಟ್ಟಣದ ಬಸ್ ನಿಲ್ದಾಣ ಸಮೀಪ ಕಾಂಗ್ರೆಸ್ ಕಾರ್ಯಕರ್ತರು, ಸಿದ್ದರಾಮಯ್ಯ ಅಭಿಮಾನಿಗಳು ಈಚೆಗೆ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಶದಲ್ಲೇ ಮಾದರಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನಷ್ಟು ವರ್ಷ ಉತ್ತಮ ಆಡಳಿತ ನೀಡುವಂತಾಲಿ ಎಂದರು.
ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಮಾಲತೇಶ್ ಭಂಡಾರಿ, ಯುವ ಕಾಂಗ್ರೆಸ್ ಅಧ್ಯಕ್ಷ ಸದ್ದು ಬಳ್ಳಿಗಾವಿ, ಶಿವಾನಂದಸ್ವಾಮಿ, ರಾಘವೇಂದ್ರ ಗಂಗೊಳ್ಳಿ, ಗಣೇಶ್ ಭಂಡಾರಿ, ತೇಜಪ್ಪ, ನಿರ್ಮಲಾ, ಶಿವಯೋಗಿ, ಸಂತೋಷ್, ಚಂದ್ರಪ್ಪ, ಸಾಜೀದ್ ಅಲಿ, ವಸೀಮ್, ತಾಹ, ರವಿ ಇತರರಿದ್ದರು.













