ತೀರ್ಥಹಳ್ಳಿ: ಆಗುಂಬೆ ಘಾಟಿಯ 12ನೇ ತಿರುವಿನಲ್ಲಿ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಘಟನೆ ನಡೆದಿದೆ. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್ ಕಾಲಿಗೆ ಗುಂಡೇಟು!
ಇಂದು ಮಧ್ಯಾಹ್ನ (ಭಾನುವಾರ) ಘಾಟಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ದಿಢೀರ್ ಮರ ಬಿದಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗಿಲ್ಲ ಕಾರಿನ ಎದುರಿನ ಗ್ಲಾಸ್ ಒಡೆದಿದ್ದು, ಕಾರಿನ ಬಾನಟ್ಟಿಗೆ ಹಾನಿಯಾಗಿರುತ್ತದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ > ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ಸಿಇಟಿ/ಕಾಮೆಡ್-ಕೆ ಸಂವಾದ, ಶಿಕ್ಷಣ ತಜ್ಞರ ಪ್ರಮುಖ ಸಲಹೆಗಳೇನು?
ಬ್ರೆಝಾ ಕಾರಿನವರು ಆರಗದಿಂದ ಮಂದಾರ್ತಿ ದೇವಸ್ಥಾನಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಮರ ಬೀಳುತ್ತಿದ್ದಂತೆ ಆಗುಂಬೆ ಘಾಟಿಯಲ್ಲಿ ಒಂದು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ಎರಡು ಬದಿಯಲ್ಲಿ ವಾಹನ ದಟ್ಟಣೆಯಿಂದ ಕೂಡಿತ್ತು ನಂತರ ಅರಣ್ಯಾಧಿಕಾರಿಗಳು ಮತ್ತು ಆಗುಂಬೆ ಪೊಲೀಸ್ ನವರು ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!













