ಶಿವಮೊಗ್ಗ: ನಗರದ ಹಲವು ಬಾರ್ & ರೆಸ್ಟೋರೆಂಟ್ ಹಾಗೂ ವೈನ್ ಶಾಪ್ಗಳಿಗೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾಲೀಕರಿಗೆ ತಿಳುವಳಿಕೆ ನೊಟೀಸ್ ನೀಡಲಾಗಿದೆ.
ಇದನ್ನೂ ಓದಿ > ಮಹಿಷಿ ಮಠದಲ್ಲಿ ಕಳ್ಳತನ, 1 ಕೋಟಿಗೂ ಅಧಿಕ ಮೌಲ್ಯದ ಚಿನ್ನ ವಶ
21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವಕರಿಗೆ ಯಾವುದೇ ಕಾರಣಕ್ಕೂ ಮದ್ಯಪಾನ ಅಥವಾ ಧೂಮಪಾನ ಮಾಡಲು ಅವಕಾಶ ನೀಡಬಾರದು ಎಂದು ಅಂಗಡಿಗಳ ಮಾಲೀಕರಿಗೆ ಹಾಗೂ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಯಿತು.
ಇದನ್ನೂ ಓದಿ > ಶಿವಮೊಗ್ಗ, ಪಾದಾಚಾರಿ ಮಹಿಳೆಗೆ ಡಿಕ್ಕಿ ಹೊಡೆದ ಕಾರು!
ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುವುದನ್ನು ತಡೆಯುವ ಮತ್ತು ನಗರದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.














