• About Us
  • Advertise
  • Privacy & Policy
  • Contact Us
Friday, June 26, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 26, 2026
in ಶಿವಮೊಗ್ಗ
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ
Share on FacebookShare on TwitterShare on WhatsApp
ಶಿವಮೊಗ್ಗ : ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ನೇತೃತ್ವದಲ್ಲಿ ಪ್ರತಿ ಹುಣ್ಣಿಮೆಯಂದು ಏರ್ಪಡಿಸುವ ಮನೆ-ಮನ ಸಾಹಿತ್ಯ ಕಾರ್ಯಕ್ರಮದ 251 ನೇ ತಿಂಗಳ ಕಾರ್ಯಕ್ರಮವನ್ನು ಜೂ. 29 ರಂದು ಸೋಮವಾರ ಸಂಜೆ 5:300 ರಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಡಿ. ಮಂಜುನಾಥ ಸುದ್ದಿ ಗೋಷ್ಠಿಯಲ್ಲಿ ವಿವರಿಸಿದ್ದಾರೆ.
ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಹಾಗೂ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ. ಎಸ್. ಈಶ್ವರಪ್ಪ ಅವರ ಕುಟುಂಬದ ಆತಿಥ್ಯದಲ್ಲಿ ಈ ಬಾರಿಯ ಸಾಹಿತ್ಯ ಹುಣ್ಣಿಮೆ ನಡೆಯಲಿದೆ.  ಅಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಾಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಸಾನಿಧ್ಯ ವಹುಸಲಿದ್ದು, ಖ್ಯಾತ ಚಲನಚಿತ್ರ ನಟರ, ರಂಗಕರ್ಮಿ ಸುಚೇಂದ್ರ ಪ್ರಸಾದ್ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ >  ವೃದ್ಧೆಯ ಕೊಲೆ, ಸುತ್ತುಕೋಟೆ ವ್ಯಕ್ತಿಗೆ ಜೀವಾವಧಿ ಶಿಕ್ಷೆ!
ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಯುವ ನಾಯಕ ಕೆ.ಇ. ಕಾಂತೇಶ್ ಉಪಸ್ಥಿತರಿರಲಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಲಿದ್ದಾರೆ. ಇದೇ ವೇಳೆ ಕಸಾಪ ಹಿರಿಯ ಸದಸ್ಯರಾದ ಟಿ. ಆರ್. ಅಶ್ವತ್ಥ ನಾರಾಯಣ ಶೆಟ್ಟಿ ಅವರನ್ನು ಸನ್ಮಾನಿಸಲಾಗುತ್ತಿದೆ.
250 ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಆತಿಥ್ಯ ನೀಡಿದ್ದ ಆಕಾಶ್ ಇನ್ ಮಾಲೀಕರಾದ ಹೊಸತೋಟ ಸೂರ್ಯನಾರಾಯಣ, ಸನ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಆಕಾಶ್, ಉದ್ಯಮಿಗಳಾದ ಉಮೇಶ್ ಆರಾಧ್ಯ, ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶೋಭಾ ರಾಮಕೃಷ್ಣ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ >  ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!
ಇದೇ ವೇಳೆ ಶ್ರೀ ಬನ್ನಂಜೆ ಗೋವಿಂದಾಚಾರ್ಯರ ತಂದೆ ಪಡುಮುನ್ನೂರು ಶ್ರೀ ನಾರಾಯಣ ಆಚಾರ್ಯರ ಜೀವನ ಚರಿತ್ರೆ ಆಧರಿಸಿದ ‘ನನ್ನ ಪಿತಾಮಹ’ ನಾಟಕ ಪ್ರದರ್ಶನ ಗೊಳ್ಳಲಿದೆ. ವೀಣಾ ಬನ್ನಂಜೆರವರ ಕೃತಿ ಆಧಾರಿತ ನಾಟಕದ ಮುಖ್ಯ ಪಾತ್ರ ಮತ್ತು ನಿರ್ದೇಶನವನ್ನು ಚಲನಚಿತ್ರ ನಟರಾದ ಸುಚೇಂದ್ರ ಪ್ರಸಾದ್ ಅಭಿನಯಿಸಲಿದ್ದಾರೆ. ವಿವಿಧ ಚಲನಚಿತ್ರ ಹಾಗೂ ರಂಗಭೂಮಿ ಕಲಾವಿದರು ನಾಟಕದಲ್ಲಿ ನಟಿಸಲಿದ್ದಾರೆ.
ನಗರದ ಬೇರೆ ಬೇರೆ ಬಡಾವಣೆಗಳಿಂದ 250 ಕ್ಕೂ ಹೆಚ್ಚು ಗಾಯಕರು ಭಾವಗೀತೆ, ಭಕ್ತಿಗೀತೆ, ವಚನ, ತತ್ವಪದ, ದಾಸರಪದ, ಜನಪದ ಗೀತೆಗಳನ್ನು ಹಾಡುವ ಕಾರ್ಯಕ್ರಮ ರೂಪಿಸಲಾಗಿದೆ. ಆರಂಭದಲ್ಲಿ ಒಟ್ಟಿಗೆ ನಾಡಗೀತೆ ಹಾಡಿದರೆ, ಆ ನಂತರ ಐವತ್ತು ಗಾಯಕಿಯರ ಒಂದು ತಂಡ ಎರಡು ಗೀತೆಗಳನ್ನು ಹಾಡಲಿದ್ದಾರೆ.ಗಾಯಕಿಯರಾದ ನಳಿನಾಕ್ಷಿ, ಲಲಿತಮ್ಮ ವಿಠಲದಾಸ್, ಲಕ್ಷ್ಮೀ ಮಹೇಶ್, ಸುಶ್ಮಾ, ಡಾ. ನೇತ್ರಾವತಿ, ಸುಶೀಲಾ ಷಣ್ಮುಗಂ, ಕೆ. ಎಸ್. ಮಂಜಪ್ಪ ನಿರ್ದೇಶನದಲ್ಲಿ ನಡೆಯಲಿದೆ.
ನೂರು ಮಕ್ಕಳು ಎರಡು ಕವನಗಳನ್ನು ಹಾಡಲಿದ್ದಾರೆ. ವಿದೂಷಿ ಉಮಾ ದಿಲೀಪ್ ಅವರು ತಾವೇ ರಚಿಸಿದ ಕವನಗಳಿಗೆ ರಾಗಸಂಯೋಜನೆ, ನೃತ್ಯ ಸಂಯೋಜನೆ ಮಾಡಿದ್ದಾರೆ. ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆ ನೃತ್ಯ ವಿದ್ಯಾರ್ಥಿಗಳು ಪ್ರದರ್ಶನ ನೀಡಿಲಿದ್ದಾರೆ.
ಇದನ್ನೂ ಓದಿ >  ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್‌-5 ಸುದ್ದಿಗಳು
ವಿದೂಷಿ ಪುಷ್ಪಾ ಅವರ ನಿರ್ದೇಶನದಲ್ಲಿ ಜನಪದ ಹಾಡು, ನೃತ್ಯ ಕಾರ್ಯಕ್ರಮವನ್ನು ಪುಷ್ಪಾ ಫರ್ ಫಾರ್ಮಿಂಗ್ ಆರ್ಟ್ಸ್ ಕಲಾವಿದರು ನಡೆಸಿಕೊಡಲಿದ್ದಾರೆ. ಜಿಲ್ಲೆಯ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಕಾರಣ ಹೊಸನಗರದ ಬಾಲಕಿ ಆರ್ವಿ, ಶಿಕಾರಿಪುರದ ಸ್ಕಂದ ಡಿ. ಎಸ್., ಶಿವಮೊಗ್ಗದ ನೇಹಾ ರಾಜಪ್ಪ, ಸೊರಬದ ಸಂಗೀತ ಚೌವ್ಹಾಣ್ ಅವರುಗಳು ಒಂದೊಂದು ಹಾಡು ಹೇಳಲಿದ್ದಾರೆ.
ದೂರದರ್ಶನ ಹರಟೆ ಖ್ಯಾತಿಯ ಭದ್ರಾವತಿ ಉಮೇಶ್ ಗೌಡರು ಕನ್ನಡ ಸಾಹಿತಿಗಳ ಬದುಕಿನ ಹಾಸ್ಯ ಪ್ರಸಂಗ ಕುರಿತು ಮಾತನಾಡಲಿದ್ದಾರೆ. ಶಿಕ್ಷಕಿ ಕವಿತಾ ಉಂಬಳೇಬೈಲು ಕಥೆ ಹೇಳುತ್ತಾರೆ. ಕವಿಗಳಾದ ಬಿ. ಟಿ. ಅಂಬಿಕಾ, ಲೀಲಾವತಿ ಯುವರಾಜ್, ಶಂಕರಘಟ್ಟ ಕೆ. ಎನ್. ರಮೇಶ್ ಕವನ ವಾಚಿಸುವರು. ಕವಿಗಳಾದ ಡಾ. ನಿವೇದಿತಾ ಹೆಗಡೆ, ಡಾ. ವಿನಯ ಶ್ರೀನಿವಾಸ್, ಶಶಿಧರ ಅವರು ಹನಿಗವನ ವಾಚಿಸಲಿದ್ದಾರೆ.
ಕಾರ್ಯಕ್ರಮದ ನಂತರ ರಂಗಮಂದಿರದಿಂದ ದೂರದ ಬಡಾವಣೆಗೆ ತೆರಳಲಿರುವ ಗಾಯಕರು, ಕಲಾವಿದರಿಗೆ ನಗರ ಸಾರಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯ ಪ್ರತಿಷ್ಠಿತ ಕಾರ್ಯಕ್ರಮಗಳಲ್ಲಿ ಸಾಹಿತ್ಯ ಹುಣ್ಣಿಮೆಯೂ ಒಂದಾಗಿದೆ. ಕಳೆದ ಇಪ್ಪತ್ತೊಂದು ವರ್ಷ ಪೂರೈಸಿ ಮುಂದು ವರಿಯುತ್ತಿರುವ ಈ ಕಾರ್ಯಕ್ರಮ ಸಾವಿರಾರು ಪ್ರತಿಭೆಗಳಿಗೆ ವೇದಿಕೆಯಾಗಿದೆ. ನಗರದಲ್ಲಿ ಮಾತ್ರವಲ್ಲದೆ ಜಿಲ್ಲೆಯ ಬೇರೆ ಬೇರೆ ತಾಲ್ಲೂಕು ಗಳು, ಗ್ರಾಮಾಂತರ ಸ್ಥಳದಲ್ಲೂ ಆಯೋಜನೆ ಮಾಡಿದ್ದೇವೆ. ಆತಿಥ್ಯ ನೀಡಿದ ಮಹನೀಯರು, ನೆರವಾದ ಸಹೃದಯಿಗಳು, ಭಾಗವಹಿಸಿದ್ದ ಗಾಯಕರು, ಕಥೆಗಾರರು, ಕವಿಗಳು, ಹನಿಗವನ ವಾಚಿಸಿದವರು, ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟ ನಾಡಿನ ಪ್ರಸಿದ್ಧರಿಗೆ, ಹೊಸಬರಿಗೆ, ಹಿರಯರಿಗೆ ಎಲ್ಲರಿಗೂ ಡಿ. ಮಂಜುನಾಥ ಕೃತಜ್ಞತೆ ಸಲ್ಲಿಸಿದರು. ಮುಂದೆಯೂ ಹೆಚ್ಚಿನ ಸಹಕಾರಕೊಡಿ ಆ ಮೂಲಕ ಸಹೃದಯಿ ಸಮಾಜ ಕಟ್ಟೋಣ ಎಂದು ವಿನಂತಿಸಿದರು.
ಸಾಹಿತ್ಯ ಹುಣ್ಣಿಮೆಗೆ ಮೊದಲ ಆತಿಥ್ಯ ನೀಡಿದವರು ಕೆ. ಎಸ್. ಈಶ್ವರಪ್ಪನವರ ಕುಟುಂಬ. ಆ ನಂತರ ಪ್ರಮುಖ ಘಟ್ಟದಲ್ಲಿ ಅದಕ್ಕೆ ಶಕ್ತಿತುಂಬಿ ಜನಾಕರ್ಶಕ ಗೊಳ್ಳುವಂತೆ ಪ್ರೇರಣೆ ನೀಡಿದ್ದನ್ನು ಡಿ. ಮಂಜುನಾಥ ಕೃತಜ್ಞತೆಯಿಂದ ಸ್ಮರಿಸಿದರು.
 ಸುದ್ದಿ ಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಯುವ ನಾಯಕರಾದ ಕೆ.ಈ.ಕಾಂತೇಶ್, ಉಮೇಶ್ ಆರಾಧ್ಯ, ಯು.ಮಧುಸೂದನ್ ಐತಾಳ್, ಶ್ರೀಕಾಂತ್, ಎಂ.ನವೀನ್ ಕುಮಾರ್, ಡಿ.ಗಣೇಶ್ ಉಪಸ್ಥಿತರಿದ್ದರು.
Tags: 251st month of literary full moonkannada newskannada news livelatest newsmalnad newsmass singing by 250 singersshimogashivamoggaಶಿವಮೊಗ್ಗ
Previous Post

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

Next Post

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

June 26, 2026
ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

ಶರಾವತಿ ಜಲವಿದ್ಯುದಾಗರದಲ್ಲಿ ಪೈಪ್ ಲಿಕೇಜ್, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯುತ್ ಸ್ಥಗಿತ!

June 26, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL