ಶಿವಮೊಗ್ಗ: ಜಿಲ್ಲೆಯ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ದಾವಣಗೆರೆಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > ತೀರ್ಥಹಳ್ಳಿ, ಕೌರಿಹಕ್ಲು ಬಳಿ ರಸ್ತೆಗೆ ನುಗ್ಗಿದ ನೀರು!, ಧರೆಗುರುಳಿದ ವಿದ್ಯುತ್ ಕಂಬಗಳು
ಅಪಘಾತದ ತೀವ್ರತೆಗೆ ಬಸ್ಗೆ ಸಾಕಷ್ಟು ಹಾನಿಯಾಗಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್ನಲ್ಲಿದ್ದ 7ರಿಂದ 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.
ಇದನ್ನೂ ಓದಿ > ಪೊಲೀಸರ ಬಗ್ಗೆ ಅಪಹಾಸ್ಯ, ಇಬ್ಬರನ್ನ ವಶಕ್ಕೆ ಪಡೆದ ಸಂಚಾರಿ ಪೊಲೀಸರು!
ಲಭ್ಯ ಮಾಹಿತಿಯ ಪ್ರಕಾರ, ರಸ್ತೆ ಬದಿಯಲ್ಲಿ ನಿಂತಿದ್ದ ಓಮಿನಿ ವಾಹನ ಇದ್ದಕ್ಕಿದ್ದಂತೆ ಬಲಭಾಗಕ್ಕೆ ಚಾಲಾಯಿಸಿದ್ದಾನೆ. ಇದೇ ಸಂದರ್ಭದಲ್ಲಿ ಸಿಮೆಂಟ್ ತುಂಬಿದ ಬೊಲೇರೋ ವಾಹನ ಅಡ್ಡ ಬಂದಿದ್ದು, ಅಪಘಾತ ತಪ್ಪಿಸುವ ಉದ್ದೇಶದಿಂದ ಚಾಲಕ ಏಕಾಏಕಿ ಬಸ್ ಅನ್ನು ಎಡಭಾಗಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ >ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.















