ಶಿವಮೊಗ್ಗ: ಕಳೆದ 6 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ನನ್ನು ತುಂಗಾನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ ಘಟನೆ ನಡೆದಿದೆ.
ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ
ಬಂಧಿತ ಆರೋಪಿಯನ್ನು ಶಿವಮೊಗ್ಗದ ನಿವಾಸಿ ಕಲೀಂ ಎಂದು ಗುರುತಿಸಲಾಗಿದೆ.
ಆರೋಪಿಯ ವಿರುದ್ದ ಕೊಲೆ ಯತ್ನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಆರೋಪದ ಮೇರೆಗೆ ಒಟ್ಟಾರೆ 6 ಪ್ರಕರಣಗಳು ದಾಖಲಾಗಿವೆ. ಆದರೆ ಆರೋಪಿಯು ಯಾವುದೇ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಇದನ್ನೂ ಓದಿ > > ಆಗುಂಬೆ ಪೊಲೀಸ್ ಠಾಣೆಯ ಹೆಡ್ಕಾನ್ಸ್ಟೇಬಲ್ ಡಿ.ಶಿವಣ್ಣ ನಿಧನ
ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಎಸ್ ಸಿ ನಂಬರ್ 204/23 ರಲ್ಲಿ ಆರೋಪಿ ವಿರುದ್ದ ಬಂಧನಕ್ಕೆ ಜಾರಿಯಾಗಿತ್ತು. ತುಂಗಾ ನಗರ ಠಾಣೆ ಪ್ರೋಸೆಸ್ ಸಿಬ್ಬಂದಿಗಳಾದ ಕೃಷ್ಣಮೂರ್ತಿ, ಶಾಮ್ ಕುಮಾರ್, ಪ್ರಶಾಂತ್, ನಾಗಪ್ಪರವರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ > > ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲಾ ನಿಷೇಧ!, ಯಾವೆಲ್ಲ ಉತ್ಪನ್ನಗಳಿಗೆ ನಿಷೇಧ?














