ಶಿವಮೊಗ್ಗ: ಯುವತಿ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಯುವಕ, ಆಕೆಯ ಭಾವಿ ಪತಿ ಹಾಗೂ ಸಹೋದರನ ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ > > ಶಿವಮೊಗ್ಗ, ವೆಜ್, ನಾನ್ವೆಜ್ ಫುಡ್ ಕೋರ್ಟ್ಗಳಿಗೆ ಎಸಿ ತಂಡದ ದಿಢೀರ್ ದಾಳಿ
ವೆಂಕಟೇಶನಗರದ ಯುವತಿಯೊಬ್ಬರನ್ನು ಮಣಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆತನ ದುಶ್ಚಟಗಳಿಂದಾಗಿ ಯುವತಿ ದೂರವಾಗಿದ್ದಳು. ಬಳಿಕ ಕುಟುಂಬದವರು ಆಕೆಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಮಣಿ, ಮಧ್ಯರಾತ್ರಿ ಯುವತಿಯ ಮನೆ ಬಳಿ ತೆರಳಿ ನಿಲ್ಲಿಸಿದ್ದ ಎರಡು ಪಲ್ಸರ್ ಬೈಕ್ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.
ಇದನ್ನೂ ಓದಿ > > ಭದ್ರಾವತಿ, 3 ದಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೆಲ್ಲಿ?
ಕೃತ್ಯದ ದೃಶ್ಯಗಳು ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














