ಶಿವಮೊಗ್ಗ : ನಗರದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಾಂಧಿಪಾರ್ಕ್ನಲ್ಲಿ ಸ್ಥಗಿತಗೊಂಡಿದ್ದ ಸೌಲಭ್ಯಗಳನ್ನು ಪುನಾರಂಭಿಸಿ, ಹೊಸ ಆಕರ್ಷಣೆಗಳನ್ನು ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಇಂದು ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಮಾಯಣ್ಣ ಗೌಡ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕರು, “ಪಾರ್ಕ್ನ ಭದ್ರತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು

-
ಎರಡು ಶಿಫ್ಟ್ಗಳಲ್ಲಿ 14 ಹೋಮ್ ಗಾರ್ಡ್ ಗಳನ್ನು ನೇಮಿಸಲಾಗಿದೆ.
ಹಾಳಾಗಿದ್ದ ಮಕ್ಕಳ ಟ್ರೈನ್ ಅನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ನೀಡಲಾಗಿದೆ.
-
ಸ್ವಿಮ್ಮಿಂಗ್ ಪೂಲ್ ಕಾರಂಜಿ ಕೆಲಸ ಮುಕ್ತಾಯವಾಗಿದೆ. 15 ದಿನಗಳೊಳಗೆ ನಿರ್ವಹಣಾ ಸಮಿತಿ ರಚಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುವುದು.
-
5 ಕೃತಕ ಕೊಳಗಳನ್ನು ನಿರ್ಮಿಸಲಾಗುತ್ತಿದೆ.
-
ವನ್ಯಜೀವಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜ್ಞಾನ ಉದ್ಯಾನವನವನ್ನು ಒಂದು ವಾರದಲ್ಲಿ ಸಾರ್ವಜನಿಕರ ಉಪಯೋಗಕ್ಕೆ ಬರುವಂತೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಮಾತನಾಡಿ,
-
ಪಾಲಿಕೆ ಅಧಿಕಾರಿಗಳ ವಿಶೇಷ ಸಮಿತಿ ರಚನೆ.
-
ಮಕ್ಕಳ ಆಟಿಕೆಗಳನ್ನು ನವೀಕರಿಸಲಾಗಿದೆ.
-
ಪಾರ್ಕ್ ಒಳಗೆ ಸುಂದರ ಅಕ್ವೇರಿಯಂ
-
ಬೇಕರಿ, ಟೀಶಾಪ್, ಜ್ಯೂಸ್ ಅಂಗಡಿಗಳಿಗೆ ಟೆಂಡರ್ ಕರೆಯಲಾಗಿದೆ.
-
ಶುಲ್ಕವನ್ನು ಜಾಸ್ತಿಮಾಡದೆ ಕೇವಲ 10 ರೂ. ನಿಗಧಿ ಪಡಿಸಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಉಪ ಆಯುಕ್ತ ಹೊಸೂರು ಹಾಗೂ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.













