ಶಿವಮೊಗ್ಗ: ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಲು ಮುಂದಾಗಿದ್ದ ಟ್ರ್ಯಾಕ್ಟರ್ ಚಾಲಕನೋರ್ವನಿಗೆ, ಮಹಾನಗರ ಪಾಲಿಕೆ ಆಡಳಿತದ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ವರದಿಯಾಗಿದೆ.
ಕೃಷಿ ನಗರ ಸಮೀಪದ ರಸ್ತೆ ಬದಿಯ ಖಾಲಿ ಜಾಗದಲ್ಲಿ ಟ್ರ್ಯಾಕ್ಟರ್ ಚಾಲಕನೋರ್ವ ಕಸ ಹಾಕುತ್ತಿದ್ದ ವೇಳೆ, ಪಾಲಿಕೆ ಪರಿಸರ ಅಭಿಯಂತರ ಲೋಹಿತ್ ಯಾದವ್ ನೇತೃತ್ವದ ಅಧಿಕಾರಿಗಳ ತಂಡ ದಿಡೀರ್ ಕಾರ್ಯಾಚರಣೆ ನಡೆಸಿ ಟ್ರ್ಯಾಕ್ಟರ್ ಚಾಲಕನಿಗೆ ಸ್ಥಳದಲ್ಲಿಯೇ ದಂಡ ವಿಧಿಸಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಕಸ ಹಾಕಿದರೆ ಕಾನೂನು ರೀತ್ಯ ಕ್ರಮ ಜರುಗಿಸುವ ಎಚ್ಚರಿಕೆಯನ್ನು ಪರಿಸರ ಅಭಿಯಂತರ ಲೋಹಿತ್ ಯಾದವ್ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯ ನಿರೀಕ್ಷಕ ಅಮರೇಶ್, ವಾರ್ಡ್ ಮೇಸ್ತ್ರಿ ನಾಗರಾಜ್ ಮೊದಲಾದವರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwanismg@gmail.com













