• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 28, 2026
in ಶಿವಮೊಗ್ಗ
ಜೆ.ಎನ್.ಎನ್.ಸಿ.ಇ: ಐಡಿಯಾ ಲ್ಯಾಬ್ ಲೋಕಾರ್ಪಣೆ, ಏನಿದು ಐಡಿಯಾ ಲ್ಯಾಬ್?
Share on FacebookShare on TwitterShare on WhatsApp

ಅನುಭವಾತ್ಮಕ ಕಲಿಕೆ – ನವೀನತೆಯ ಜಾಗೃತಿ ಅತ್ಯಗತ್ಯ

ಶಿವಮೊಗ್ಗ: ಆವಿಷ್ಕಾರಯುತ ಕಾಲದಲ್ಲಿ ಅನುಭವಾತ್ಮಕ‌ ಕಲಿಕೆ ಮತ್ತು ನಾವೀನ್ಯಯುತ ಚಿಂತನೆಗಳ ಬಗ್ಗೆ ಸದಾ ಜಾಗೃತಿ ಅತ್ಯಗತ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
 ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶುಕ್ರವಾರ ನೂತನವಾಗಿ ಸ್ಥಾಪಿಸಿರುವ ಎಐಸಿಟಿಇ ಐಡಿಯಾ ಲ್ಯಾಬ್ ಮತ್ತು ಕಂಪ್ಯೂಟರ್ ಸೈನ್ಸ್ ಸಂಕೀರ್ಣ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಐಡಿಯಾ ಲ್ಯಾಬ್ ನಂತಹ ಯೋಜನೆಗಳು ಅಕಾಡೆಮಿ ಮತ್ತು ಉದ್ಯಮದ ನಡುವಿನ ಸಹಕಾರವನ್ನು ಉತ್ತೇಜಿಸಲಿದೆ. ವಿಜ್ಞಾನ ಮತ್ತು ಜ್ಞಾನಕ್ಕೆ ಅವಿನಾಭಾವ ಸಂಬಂಧವಿದೆ. ಉತ್ತಮ ಮಾತು ಮತ್ತು ವ್ಯಕ್ತಿತ್ವಕ್ಕೆ ಹೆಚ್ಚು ಆದ್ಯತೆ ನೀಡುವ ಜ್ಞಾನ ನಮಗೆ ಬೇಕು. ನಾವು ಕಲಿತ ಜ್ಞಾನ ಸಮಾಜಕ್ಕೆ ಅರ್ಪಣೆಯಾಗಬೇಕು ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿ, ನಾಲ್ಕು ಗೋಡೆಯ ನಡುವಿನ ಕಲಿಕೆ‌ಯ ಜೊತೆಗೆ, ವಾಸ್ತವತೆಯ ಅವಶ್ಯಕತೆಗೆ ತಕ್ಕಂತೆ ವಿದ್ಯಾರ್ಥಿಗಳನ್ನು ತಯಾರು ಮಾಡಲು ಐಡಿಯಾ ಲ್ಯಾಬ್ ನಂತಹ ವೇದಿಕೆ ಸಹಕಾರಿ. ಸಕ್ರಿಯ ಭಾಗವಹಿಸುವಿಕೆ‌ ಮೂಲಕ ಹೊಸ ಆಧುನಿಕ ತಂತ್ರಜ್ಞಾನ, ಕೌಶಲ್ಯತೆಗೆ ಯುವ ಸಮೂಹ ತೆರೆದು ಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳ ಜೊತೆಗೆ ಉದ್ಯಮ ಸಂಸ್ಥೆಗಳು ಕೂಡ ಐಡಿಯಾ ಲ್ಯಾಬ್ ಉಪಯೋಗ ಪಡೆಯಬಹುದಾಗಿದೆ.
ಕೃತಕ ಬುದ್ಧಿಮತ್ತೆಯನ್ನು ಬಳಸಿ ಮಾದರಿಗಳ ತರಬೇತಿ, ಪರೀಕ್ಷೆ ಮತ್ತು ಕಾರ್ಯಗತಗೊಳಿಸಲು ಬೇಕಾಗುವ ಸಂಪೂರ್ಣ ತಾಂತ್ರಿಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವಲ್ಲಿ ವಿದ್ಯಾಸಂಸ್ಥೆಯ ಪಾತ್ರ ಪ್ರಮುಖವಾಗಿದೆ. ಎಐ ತಂತ್ರಜ್ಞಾನಕ್ಕೆ ನಮ್ಮ ಸ್ಥಳೀಯ ಭಾಷೆಗಳ ಮೂಲಕ ಮತ್ತಷ್ಟು ತರಬೇತಿ ನೀಡುವ ಕಾರ್ಯ ನಡೆಯಬೇಕು. ಇದರಿಂದ ಮೇಕ್ ಇನ್ ಇಂಡಿಯಾದಂತಹ ಪರಿಕಲ್ಪನೆಗೆ ಹೆಚ್ಚು ಬಲ ನೀಡಿದಂತಾಗುತ್ತದೆ ಎಂದು ಹೇಳಿದರು.

ಏನಿದು ಐಡಿಯಾ ಲ್ಯಾಬ್?

ಎಐಸಿಟಿಯಿ (AICTE) ಸಂಸ್ಥೆಯ ಪ್ರಮುಖ ಯೋಜನೆಯಾದ ಐಡಿಯಾ ಲ್ಯಾಬ್, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ಕ್ಕೆ ಅನುಸಾರವಾಗಿ, ವಿದ್ಯಾರ್ಥಿಗಳಲ್ಲಿ ನಾವೀನ್ಯತೆ ಆಧಾರಿತ ಮತ್ತು ಪ್ರಾಯೋಗಿಕ ಕಲಿಕೆಯನ್ನು ಉತ್ತೇಜಿಸುತ್ತದೆ.
ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ, 7,500 ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಜೆ.ಎನ್.ಎನ್.ಸಿ.ಇ ಐಡಿಯಾ ಲ್ಯಾಬ್, ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಲ್ಲಿ 24×7 ಕಾರ್ಯನಿರ್ವಹಿಸಲಿದೆ. ತ್ರಿಡಿ ಪ್ರಿಂಟರ್‌ಗಳು, ತ್ರಿಡಿ ಸ್ಕ್ಯಾನರ್‌ಗಳು, ರೋಬೋಟಿಕ್ ಪರಿಕರಗಳು, ಮರ, ಪ್ಲಾಸ್ಟಿಕ್, ಅಲ್ಯೂಮಿನಿಯಂ ಮತ್ತು ಫೋಮ್‌ನಂತಹ ವಸ್ತುಗಳನ್ನು ವಿನ್ಯಾಸಗೊಳಿಸುವ ಸಿ.ಎನ್.ಸಿ ರೌಟರ್‌ಗಳು, ಎಲೆಕ್ಟ್ರಾನಿಕ್ ಸರ್ಕ್ಯೂಟ್ ವಿನ್ಯಾಸವನ್ನು ನಿಖರವಾಗಿ ಮುದ್ರಿಸಬಲ್ಲ ಪಿಸಿಬಿ ಮುದ್ರಣ ಯಂತ್ರ ಮತ್ತು ಲೇಸರ್ ಕಟರ್‌ಗಳು, ಡ್ರೋನ್ ಯುನಿಟ್, ಐಓಟಿ ಪರಿಕರಗಳು, ಅಮ್ಯೆಚುರ್ ರೇಡಿಯೋ ಅಪರೇಟರ್ಸ್ ಸೇರಿದಂತೆ ಉದ್ಯಮ ಮಟ್ಟದ ಸುಮಾರು 200 ಕ್ಕೂ ಹೆಚ್ಚು ಆಧುನಿಕ ಉಪಕರಣಗಳು ಹಾಗೂ ಪ್ರಾತ್ಯಕ್ಷಿಕೆ ಸೌಲಭ್ಯಗಳನ್ನು ಹೊಂದಿದೆ. ಇದರಿಂದ‌ ಒಂದೇ ಸೂರಿನಡಿ, ಸ್ಮಾರ್ಟ್ ಉತ್ಪಾದನೆ, ಡಿಜಿಟಲ್ ಎಂಜಿನಿಯರಿಂಗ್, ಎಐ ಚಾಲಿತ ಎಂಜಿನಿಯರಿಂಗ್ ಸೇರಿದಂತೆ ವಿವಿಧ‌ ಕ್ಷೇತ್ರಗಳ ಆವಿಷ್ಕಾರಿ‌ ಯೋಚನೆಗಳು, ಕಾರ್ಯಗತಗೊಳಿಸುವ ಯೋಜನೆಗಳಾಗಿ ರೂಪಗೊಳ್ಳಲಿದೆ.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್, ಖಜಾಂಚಿ ಡಿ.ಜಿ.ರಮೇಶ್, ನಿರ್ದೇಶಕರಾದ ಎಂ.ಎಸ್.ಅನಂತದತ್ತಾ, ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಎಚ್.ಸಿ.ಶಿವಕುಮಾರ್, ಜಿ.ಎನ್.ಸುಧೀರ್, ಎಂ.ಆರ್.ಸೀತಾಲಕ್ಷ್ಮೀ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಸಂಶೋಧನಾ ಡೀನ್ ಡಾ.ಎಸ್.ವಿ.ಸತ್ಯನಾರಾಯಣ, ಐಡಿಯಾ ಲ್ಯಾಬ್ ಸಂಯೋಜಕ ಡಾ.ಎಂ.ಎಚ್.ಮೊಯಿನುದ್ದೀನ್ ಖಾನ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಜಲೇಶ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com

Tags: kannada newskannada news livelatest newsmalnad newsNESshimogashivamoggaಐಡಿಯಾ ಲ್ಯಾಬ್ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಮಾ.11-15: ಹೊರರೋಗಿಗಳ ಚಿಕಿತ್ಸೆ ಸ್ಥಗಿತ, ಕಾರಣವೇನು?

Next Post

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ

ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವೆ | ಬಿ.ಎಸ್.ಯಡಿಯೂರಪ್ಪ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL