ಶಿವಮೊಗ್ಗ: ಸಾಗರ ತಾಲ್ಲೂಕಿನ ಕಾಸ್ಪಾಡಿ ಬಳಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ವ್ಯಕ್ತಿ ಸಾವುಕಂಡಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ತಪಾಸಣೆ
ಮೃತಪಟ್ಟ ವ್ಯಕ್ತಿಯನ್ನು ಸಾಗರದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.
ಶ್ರೀನಿವಾಸ್ ಸೇರಿದಂತೆ ಐವರು ಗಾರೆ ಕೆಲಸಕ್ಕಾಗಿ ಆನಂದಪುರ ಸಮೀಪದ ಸಂಗಣ್ಣನಕೆರೆಗೆ ಬಂದಿದ್ದರು. ವ್ಯಾಪಕ ಮಳೆಯ ಕಾರಣ ಕೆಲಸವನ್ನು ಅರ್ಧಕ್ಕೆ ಸ್ಥಗಿತಗೊಳಿಸಿ ಕಾರಿನಲ್ಲಿ ಊರಿಗೆ ಮರಳುತ್ತಿದ್ದ ವೇಳೆ ಕಾಸ್ಪಾಡಿ ಸಮೀಪದ ಬಳಿ ಅಪಘಾತ ಸಂಭವಿಸಿದೆ.
ಸಾಗರ ಕಡೆಗೆ ಹೋಗುತ್ತಿದ್ದ ಕಾರು ನಿಯಂತ್ರಣ ತಪ್ಪಿದ ಪರಿಣಾಮ ಸಾಗರ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್ಗೆ ಕಾರಿನ ಹಿಂಭಾಗ ಡಿಕ್ಕಿಯಾಗಿದೆ. ಈ ವೇಳೆ ಕಾರಿನ ಹಿಂಬದಿ ಆಸನದಲ್ಲಿ ಕುಳಿತಿದ್ದ ಶ್ರೀನಿವಾಸ್ ಅವರಿಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ > ಶಾಲಾ, ಕಾಲೇಜು ವಾಹನಗಳ ದಿಢೀರ್ ತಪಾಸಣೆ, ನಾಲ್ವರು ಚಾಲಕರ ವಿರುದ್ಧ ಕೇಸ್!
ಟ್ರ್ಯಾಕ್ಟರ್ ಚಾಲಕನಿಗೂ ಸಹ ಗಾಯಗಳಾಗಿವೆ ಎನ್ನಲಾಗಿದೆ.
ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ > ಭದ್ರಾವತಿಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!














