ಆನಂದಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಡಕೆ ತೋಟಕ್ಕೆ ಬೆಂಕಿ ತಗುಲಿದ ಪರಿಣಾಮ ಮರಗಳು ಸಂಪೂರ್ಣ ಸುಟ್ಟುಹೋದ ಘಟನೆ ಮಾ.10ರ ಮಂಗಳವಾರ ಸಂಜೆ ನಡೆದಿದೆ.
ಇದನ್ನೂ ಓದಿ ಶಿವಮೊಗ್ಗ, ನಾಳೆಯಿಂದ ಹೊಟೇಲ್ಗಳು ಬಂದ್?
ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದ ಮುರುಗೇಂದ್ರ ಗೌಡ್ರು ಎಂಬವರ 1 ಎಕರೆ ಅಡಕೆ ತೋಟಕ್ಕೆ ಟ್ರಾನ್ಸ್ ಫಾರ್ಮ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆದಕಾರಣ ತೋಟಕ್ಕೆ ಬೆಂಕಿ ತಗಲಿ 3 ವರ್ಷದ 400ಕ್ಕೂ ಹೆಚ್ಚು ಅಡಕೆ ಗಿಡಗಳು ಬೆಂಕಿಗೆ ಆವತಿಯಾಗಿದೆ ಎನ್ನಲಾಗಿದೆ.
ಇದನ್ನೂ ಓದಿ ಶಿವಮೊಗ್ಗ, ಶ್ರೀಕಾಂತಣ್ಣ ಕಪ್-3 ಪೋಸ್ಟರ್ ಬಿಡುಗಡೆ
ಇದಲ್ಲದೆ ಅಡಕೆ ತೋಟಕ್ಕೆ ಅಳವಡಿಸಲಾಗಿದ್ದ ನೀರಿನ ಪೈಪ್ ಲೈನ್ ಕೂಡ ಸಂಪೂರ್ಣ ಸುಟ್ಟು ಹೋಗಿದೆ. ಇದರಿಂದ ರೈತನಿಗೆ ಅಪಾರ ಹಾನಿ ಸಂಭವಿಸಿದೆ. ವಿಷಯ ತಿಳಿದ ಕಂದಾಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














