ಭದ್ರಾವತಿ: ತಾಲೂಕಿನ ಹೆಚ್ ಕೆ ಜಂಕ್ಷನ್ ಬಳಿ ಜೋಳ ತುಂಬಿದ ಲಾರಿಯ ಚಕ್ರಕ್ಕೆ ಸಿಲುಕಿ ಬೈಕ್ನಲ್ಲಿ ಬರುತ್ತಿದ್ದ ದಂಪತಿ ಸಾವುಕಂಡಿರುವ ಘಟನೆ ನಿನ್ನೆ ರಾತ್ರಿ ನಡೆದಿದೆ.
ಇದನ್ನೂ ಓದಿ >ಅಡ್ಡ ಬಂದ ಕಾಳಿಂಗ ಸರ್ಪ, ಅಡಿಕೆ ವಾಹನ ಪಲ್ಟಿ!
ಮೃತರನ್ನು ತರೀಕೆರೆ ತಾಲೂಕಿನ ಬರಗೇನಹಳ್ಳಿ ಗೌಳಿ ಕ್ಯಾಂಪ್ ನಿವಾಸಿಯಾದ ಬಾಬು (30) ಹಾಗೂ ಅವರ ಪತ್ನಿ ಸಾವಿತ್ರಿ (27) ಎಂದು ಗುರುತಿಸಲಾಗಿದೆ.
ಜೋಳ ತುಂಬಿದ್ದ ಲಾರಿಯು ಶಿವಮೊಗ್ಗ ತರೀಕೆರೆ ಮಾರ್ಗವಾಗಿ ಹೊರಟಿದ್ದು, ದಂಪತಿಯು ಸಹ ಹೋಟೆಲ್ ಕೆಲಸ ಮುಗಿಸಿಕೊಂಡು ತರೀಕೆರೆ ಮಾರ್ಗವಾಗಿ ಬೈಕ್ ನಲ್ಲಿ ಮನೆಗೆ ಹೊರಟಿದ್ದರು. ಈ ವೇಳೆ ಲಾರಿಯ ಹಿಂಬದಿ ಚಕ್ರಕ್ಕೆ ಬೈಕ್ ಸಿಲುಕಿ ಬಿದ್ದಿದ್ದು, ಪತಿಯು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪತ್ನಿಯು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ನಮ್ಮೂರ ಬಳಗದಿಂದ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ
ಅಪಘಾತಕ್ಕೆ ಕಾರಣವೇನು ಎಂಬ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಾಗಿದೆ. ಘಟನಾ ಸ್ಥಳಕ್ಕೆ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ.














