ಸಾಗರ : ನಗರವ್ಯಾಪ್ತಿಯಲ್ಲಿ ಫ್ಲೆಕ್ಸ್ ಅಳವಡಿಕೆಯಲ್ಲಿ ನಗರಸಭೆ ತಾರತಮ್ಯ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಬುಧವಾರ ಬಿಜೆಪಿ ವತಿಯಿಂದ ನಗರಸಭೆ ಎದುರು ಪ್ರತಿಭಟನೆ ನಡೆಸಲಾಯಿತು.

ಮಾರಿಕಾಂಬಾ ಜಾತ್ರೆ ಸಂದರ್ಭದಲ್ಲಿ ನಗರದಾದ್ಯಂತ ಫ್ಲೆಕ್ಸ್ಗಳನ್ನು ಅಳವಡಿಸಲಾಗಿತ್ತು. ಇದರಲ್ಲಿ ಶಾಸಕರ ಫ್ಲೆಕ್ಸ್ಗಳೇ ಹೆಚ್ಚು ರಾರಾಜಿಸುತಿತ್ತು. ಊರು ತುಂಬಾ ಫ್ಲೆಕ್ಸ್ ಹಾಕಿದ್ದರಿಂದ ನಗರಸಭೆಗೆ ಬಂದ ಆದಾಯ ಎಷ್ಟು ಎನ್ನುವುದನ್ನು ಪೌರಾಯುಕ್ತರು ತಿಳಿಸಬೇಕು. ಇದರ ಜೊತೆಗೆ ಬಿಜೆಪಿಯವರು ಹಾಕಿರುವ ಫ್ಲೆಕ್ಸ್ಗಳನ್ನು ಒಂದೆರಡು ದಿನಗಳಲ್ಲಿ ತೆಗೆಯುವ ನಗರಸಭೆ, ಶಾಸಕರು ಮತ್ತು ಅವರ ಕಡೆಯವರು ಹಾಕಿರುವ ಫ್ಲೆಕ್ಸ್ಗಳನ್ನು ತಿಂಗಳುಗಟ್ಟಲೆ ತೆಗೆಯದೆ ಇರುವ ಮೂಲಕ ಮಲತಾಯಿಧೋರಣೆ ಅನುಸರಿಸುತ್ತಿರುವುದು ಖಂಡನೀಯ. ಎಲ್ಲರಿಗೂ ಸಮಾನ ಕಾನೂನು ರೂಪಿಸಬೇಕಾದ ನಗರಸಭೆ ಅಧಿಕಾರಿಗಳು ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ನೀತಿ ಅನುಸರಿಸುತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ ಆನಂದಪುರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್, ಅಡಕೆ ತೋಟಕ್ಕೆ ಬೆಂಕಿ
ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಮಂಡಲ ಅಧ್ಯಕ್ಷ ಅರುಣ ಕುಗ್ವೆ, ನಗರಸಭೆ ಮಾಜಿ ಉಪಾಧ್ಯಕ್ಷೆ ಸವಿತಾ ವಾಸು ಮಾತನಾಡಿದರು. ಈ ಸಂದರ್ಭದಲ್ಲಿ ದೇವೇಂದ್ರಪ್ಪ ಯಲಕುಂದ್ಲಿ, ಸತೀಶ್ ಕೆ., ಗಾಯತ್ರಿ ಮಲ್ಲೇಶಪ್ಪ, ಶ್ರೀರಾಮ್, ಸಂತೋಷ್ ಶೇಟ್, ಶ್ವೇತಾ, ರವೀಂದ್ರ ಬಿ.ಟಿ.,, ಜಗನ್ನಾಥ್ ಶೇಟ್, ಸುಜಯ್, ಚಂದ್ರಕಾಂತ್, ವಿನೋದ್ ರಾಜ್, ಲೋಕೇಶ್ ಇನ್ನಿತರರು ಹಾಜರಿದ್ದರು.
ಇದನ್ನೂ ಓದಿ ಶಿವಮೊಗ್ಗ, ನಾಳೆಯಿಂದ ಹೊಟೇಲ್ಗಳು ಬಂದ್?
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














