ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಮದ ಕೊರಕೋಡು ಕ್ರಾಸ್ ಸಮೀಪದ ಇರ್ಪಿನ ಕೆರೆ ಏರಿ ಮೇಲೆ ಮದುವೆ ದಿಬ್ಬಣಕ್ಕೆ ಹೊರಟಿದ್ದ ಖಾಸಗಿ ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ.
ಸಿದ್ದಾಪುರದಿಂದ ಹಾನಗಲ್ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭಕ್ಕೆ ಹೋಗುತ್ತಿದ್ದದ ಖಾಸಗಿ ಬಸ್, ಆನವಟ್ಟಿ- ಸೊರಬ ಮಾರ್ಗವಾಗಿ ಸಂಚರಿಸುವ ವೇಳೆ ಕುಪ್ಪಗಡ್ಡೆ ಗ್ರಾಮದ ಇರ್ಪಿನ ಕೆರೆ ಏರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆ ಏರಿ ತೋಟದ ಗಟಾರಕ್ಕೆ ಮಗುಚಿ ಬಿದ್ದಿದೆ.
ಇದನ್ನೂ ಓದಿ > ಅಡಿಕೆ ತೋಟಕ್ಕೆ ಹೋಗಿದ್ದ ವ್ಯಕ್ತಿ ಸಾವು, ಆಗಿದ್ದೇನು?
ಸ್ಥಳೀಯರು ತಕ್ಷಣ ಧಾವಿಸಿ ರಕ್ಷಣಾ ಕಾರ್ಯಕ್ಕೆ ಮುಂದಾದರು. ಕೆರೆ ಪಕ್ಕದಲ್ಲಿದ್ದ ತಡೆ ಕಲ್ಲುಗಳು ಬಸ್ನ ವೇಗವನ್ನು ನಿಯಂತ್ರಿಸಿದ್ದರಿಂದ ದೊಡ್ಡ ದುರಂತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಸ್ನಲ್ಲಿ ಸುಮಾರು 50 ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಆನವಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.













