ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಘಟನೆ ಆತಂಕ ಮೂಡಿಸಿದ್ದು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ (ಪಿಡಿಜೆ) ಅಧಿಕೃತ ಇಮೇಲ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.
ಈ ಕುರಿತು ಮಾಹಿತಿ ಲಭ್ಯವಾದ ತಕ್ಷಣ ಜಯನಗರ ಪೊಲೀಸ್ ಠಾಣೆಯ ಪೊಲೀಸರು ನ್ಯಾಯಾಲಯದ ಆವರಣದಲ್ಲಿ ತಪಾಸಣೆ ಆರಂಭಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೋರ್ಟ್ ಸುತ್ತಮುತ್ತಲಿನ ಪ್ರದೇಶಗಳನ್ನು ಬಂದ್ ಮಾಡಿ ಪರಿಶೀಲನೆ ನಡೆಸಲಾಗಿದೆ.
ಇದನ್ನೂ ಓದಿ > ಮೋಟಾರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು! ಆಗಿದ್ದೇನು?
ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವನ್ನು ಸ್ಥಳಕ್ಕೆ ಕರೆಸಿ, ನ್ಯಾಯಾಲಯದ ಕಟ್ಟಡ, ಆವರಣ ಹಾಗೂ ನಿಲ್ಲಿಸಿದ್ದ ವಾಹನಗಳ ಪ್ರತಿಯೊಂದು ಭಾಗವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳಿಗಾಗಿ ಅಧಿಕಾರಿಗಳು ಕಣ್ಗಾವಲು ಹೆಚ್ಚಿಸಿದ್ದಾರೆ.
ಇದೇ ವೇಳೆ ಪೊಲೀಸ್ ಕಾರ್ಯಾಚರಣೆಗೆ ಸಹಕಾರ ನೀಡುವಂತೆ ವಕೀಲರ ಸಂಘ ತನ್ನ ಸದಸ್ಯರಿಗೆ ತುರ್ತು ಸೂಚನೆ ನೀಡಿದ್ದು, ತಪಾಸಣೆ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದೆ.
ಇದನ್ನೂ ಓದಿ > ಬೈಕ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಈ ಘಟನೆ ಹಿನ್ನೆಲೆಯಲ್ಲಿ ನ್ಯಾಯಾಲಯದ ಸುತ್ತಮುತ್ತ ಭದ್ರತೆಯನ್ನು ಮತ್ತಷ್ಟು ಕಠಿಣಗೊಳಿಸಲಾಗಿದ್ದು, ತಪಾಸಣೆ ಕಾರ್ಯ ಮುಂದುವರಿದಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದ್ದಾರೆ.














