ಹೊಸನಗರ: ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿಯಲ್ಲಿ ಧರಣಿ ನಡೆಸಿದರು.
ಮೇಲಿನ ಬೆಸಿಗೆ ಗ್ರಾಮ ಪಂಚಾಯಿತಿಯ ಎಲ್.ಗುಡ್ಡೆಕೊಪ್ಪ ನಿವಾಸಿ ರೈತ ರಾಮನಾಯ್ಕ ಅವರು, ’ನಮ್ಮ ಕುಟುಂಬಕ್ಕೆ ೫೦ ವರ್ಷಗಳ ಹಿಂದೆ 4 ಎಕರೆ ಸಾಗುವಳಿ ಜಮೀನು ಮಂಜೂರು ಆಗಿದೆ.
ಇದನ್ನೂ ಓದಿ > ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?
ಪಕ್ಕ ಪೋಡಿ ಆಗಬೇಕಾಗಿದೆ. ಅರಣ್ಯ ಇಲಾಖೆಯ ಅಭಿಪ್ರಾಯದ ಸಮಸ್ಯೆಯಿಂದ ವಿಳಂಬವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಯಾವ ಇಲಾಖೆಯಲ್ಲಿ ಕೇಳಿದರೂ ಸೂಕ್ತ ಉತ್ತರ ನೀಡುತ್ತಿಲ್ಲ. ಹಲವು ವರ್ಷಗಳಿಂದ ಇಲಾಖೆಗೆ ಅಲೆದು, ಅಲೆದು ಸಾಕಾಗಿದೆ. ತಾಲ್ಲೂಕು ಕಚೇರಿಯಲ್ಲಿ ಬಡ ರೈತರ ಸಮಸ್ಯೆ ಕೇಳುವವರಿಲ್ಲ’ ಎಂದು ದೂರಿದರು.
ಇಲಾಖೆ ಆವರಣದಲ್ಲಿ ರೈತ ಧರಣಿ ಕುಳಿತ ವಿಚಾರ ಶಾಸಕ ಆರಗ ಜ್ಞಾನೇಂದ್ರ ಅವರ ಗಮನಕ್ಕೆ ಬರುತ್ತಿದ್ದಂತೆ ತಹಶೀಲ್ದಾರ್ ಭರತ್ರಾಜ್ ಧರಣಿ ನಿರತ ರೈತ ರಾಮನಾಯ್ಕ ಅವರ ಮನವೊಲಿಸಿದ್ದಾರೆ.
ಇದನ್ನೂ ಓದಿ > ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?
ಶಾಸಕರ ಆಪ್ತ ಸಹಾಯಕ ರಾಜೇಶ್ ಹಿರೇಮನೆ, ಜಿ.ಪಂ. ಮಾಜಿ ಸದಸ್ಯ ಉಮೇಶ್ ಹೊಸನಗರ, ತ.ಮಾ. ನರಸಿಂಹ ಇದ್ದರು.














