ಶಿವಮೊಗ್ಗ: ರಿಪ್ಪನ್ ಪೇಟೆಯಲ್ಲಿ ಇಂದು ಸಂಜೆ ಗುಡುಗು, ಸಿಡಲು, ಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಜನಜೀವನ ಕೆಲಕಾಲ ಅಸ್ತವ್ಯಸ್ತಗೊಂಡಿತ್ತು.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆಯ ಆರ್ಭಟ!, ರಸ್ತೆಗೆ ಉರುಳಿದ ಮರ
ಮಳೆಯಿಂದಾಗಿ ಪಟ್ಟಣದ ಹಲವು ಪ್ರಮುಖ ರಸ್ತೆಗಳು ನೀರಿನಿಂದ ಜಲಾವೃತಗೊಂಡಿದ್ದವು. ವಿಶೇಷವಾಗಿ ಸಾಗರ ರಸ್ತೆಯಲ್ಲಿರುವ ಕಾಲೇಜು ಸಮೀಪ ರಸ್ತೆ ಸಂಪೂರ್ಣವಾಗಿ ಕೆರೆಯಂತಾಗಿ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಹೆಚ್ಚಿನ ಸಂಕಷ್ಟ ಅನುಭವಿಸಿದರು.
ಇದನ್ನೂ ಓದಿ > ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?
ಭಾರೀ ಗಾಳಿ ಬೀಸಿದ ಪರಿಣಾಮ ಮರಗಳ ಕೊಂಬೆಗಳು ಅಲುಗಾಡಿ, ಕೆಲವೆಡೆ ಸಣ್ಣ ಪ್ರಮಾಣದ ಹಾನಿ ಉಂಟಾಯಿತು. ಶ್ರೀರಾಮನಗರದಲ್ಲಿ ಸಿಡಿಲು ಬಡಿದ ಪರಿಣಾಮ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಕೆಲವರು ಆಲಿಕಲ್ಲುಗಳನ್ನು ಸಂಗ್ರಹಿಸಿ ಸಂತೋಷಪಟ್ಟರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














