ಸಾಗರ: ಸಾಗರ ತಾಲೂಕಿನ ನೇದರವಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ನೇದರವಳ್ಳಿ ಗ್ರಾಮದ ನಿವಾಸಿ, ಮುಖ್ಯ ಶಿಕ್ಷಕ ನಾರಾಯಣಪ್ಪ (58) ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ > 250 ಕ್ಕೂ ಹೆಚ್ಚು ಗಾಯಕರಿಂದ ಒಮ್ಮೆಲೆ ನಾಡಗೀತೆ, ಹೇಗಿತ್ತು ಸಾಹಿತ್ಯ ಹುಣ್ಣಿಮೆ ಸಂಭ್ರಮ?
ಇದನ್ನೂ ಓದಿ > ಶಿವಮೊಗ್ಗದಲ್ಲಿ ಇಲ್ಲಿವರೆಗೂ ಏನೇನಾಯ್ತು.̧? ಇಲ್ಲಿವೆ ಟಾಪ್-6 ಸುದ್ದಿಗಳು
ಹೊಸನಗರ ತಾಲೂಕಿನ ಆಲಗೇರಿ ಮಂಡ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಸಂಜೆ ಶಾಲೆ ಮುಗಿಸಿ ಮನೆಗೆ ಬೈಕ್ನಲ್ಲಿ ಹಿಂದಿರುಗುವಾಗ ಸಾಗರ ತಾಲೂಕಿನ ನೇದರವಳ್ಳಿ ಗ್ರಾಮದ ಬಳಿ ಎದುರಿನಿಂದ ವೇಗವಾಗಿ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಶಿಕ್ಷಕನಿಗೆ ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಶಿವಮೊಗ್ಗಕ್ಕೆ ಕರೆದೊಯ್ಯುವಾಗ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.















