ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. ವಿಷಯ ತಿಳಿದು ಶಿಕಾರಿಪುರ ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ.
ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ.
ಇದನ್ನೂ ಓದಿ > > ಜೀರೋ ಟ್ರಾಫಿಕ್ ಇದ್ದರೂ ಉಳಿಯದ ಜೀವ, ಮೂರುವರೆ ತಿಂಗಳ ಮಗು ಸಾವು!
ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,736 ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸುತ್ತದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.
ಇದನ್ನೂ ಓದಿ > > 1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!
ಮೈಸೂರು ಮಹಾರಾಜರು 1936ರಲ್ಲಿ ಕುಮದ್ವತಿ ನದಿಗೆ ಅಡ್ಡಲಾಗಿ ಅಂಜನಾಪುರ ಜಲಾಶಯ ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 23 ಅಡಿ ಎತ್ತರವಿದೆ. ಇನ್ನು, ಅಂಜನಾಪುರ ಜಲಾಶಯದ ಒಳಹರಿವು ಹೆಚ್ಚಳವಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.
ಇದನ್ನೂ ಓದಿ > > ಸಾಗರ ತಹಶೀಲ್ದಾರ್ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್
ಪಕ್ಕದಲ್ಲಿ ರಾಕ್ ಗಾರ್ಡನ್ ಇರುವುದರಿಂದ ಪ್ರವಾಸಿಗರು ಸಮಯ ಕಳೆಯಲು ಇಲ್ಲಿ ಅವಕಾಶವಾಗಲಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಪ್ರವಾಸಿಗರು ಅಂಜನಾಪುರ ಜಲಾಶಯದ ಬಳಿ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.














