ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ > ಹೊಳೆಬೆನವಳ್ಳಿ ಬಳಿ ಗದ್ದೆಗೆ ನುಗ್ಗಿದ ಕಾರು
ಶಿಕಾರಿಪುರ ಟೌನ್ ಅರಸು ನಗರದ 2ನೇ ಕ್ರಾಸ್ ನಿವಾಸಿಯಾದ ಗೌರಮ್ಮ ಎಂಬುವವರು ಜೂನ್ 4 ರಂದು ಬೆಳಿಗ್ಗೆ 8:30 ರಿಂದ ಸಂಜೆ 5:45 ರ ಅವಧಿಯಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೋಗಿದ್ದರು. ಈ ಸಮಯವನ್ನು ಬಳಸಿಕೊಂಡ ಕಳ್ಳರು, ಅವರ ಮನೆಯ ಬೀರುನಲ್ಲಿದ್ದ ಲಕ್ಷಾಂತರ ಮೌಲ್ಯದ ಸೊತ್ತನ್ನು ಲೂಟಿ ಮಾಡಿದ್ದರು. ಈ ಬಗ್ಗೆ ಗೌರಮ್ಮ ಅವರು ಜೂನ್ 5 ರಂದು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.
ಇದನ್ನೂ ಓದಿ > ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!
ಕಳ್ಳರ ಪತ್ತೆಗಾಗಿ ತಕ್ಷಣವೇ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ತನಿಖೆ ಚುರುಕುಗೊಳಿಸಿದ ವಿಶೇಷ ತಂಡವು ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಮಾಸೂರು ರಸ್ತೆ ನಿವಾಸಿಯಾದ 47 ವರ್ಷದ ಅಮಿತ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯಿಂದ ಕಳವು ಮಾಡಲಾಗಿದ್ದ 3,14,400 ರೂಪಾಯಿ ಮೌಲ್ಯದ 28 ಗ್ರಾಂ ತೂಕದ ಚಿನ್ನದ ಆಭರಣಗಳು, 26,800 ರೂಪಾಯಿ ಮೌಲ್ಯದ 134 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು ಹಾಗೂ 2 ಲಕ್ಷ ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ > ಬೈಕ್, ದೇವಸ್ಥಾನದ ಹುಂಡಿ ಕಳ್ಳನ ಬಂಧನ














