ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ದೂಗೂರು ಬಳಿ ಬೃಹತ್ ಗಾತ್ರದ ಮರವೊಂದು ಬಿರುಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದಿದ್ದು, ಈ ಹಿನ್ನಲೆಯಲ್ಲಿ ಸಾಗರದಿಂದ ಸೊರಬ, ಸೊರಬದಿಂದ ಸಾಗರ ರಸ್ತೆ ಸಂಚಾರ ಬಂದ್ ಆಗಿದೆ.
ಇದನ್ನೂ ಓದಿ > ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!
ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯಾಚರಣೆ ಆರಂಭ
ಮರ ರಸ್ತೆಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಉಳವಿಯ ಅರಣ್ಯ ಗಸ್ತು ಪಾಲಕ ಪ್ರವೀಣ್ ಕುಮಾರ್, ವಾಚರ್ ಶ್ರೀಕಾಂತ್ ಆಗಮಿಸಿ, ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಬೃಹತ್ ಗಾತ್ರದ ಮರವನ್ನು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೂ ಒಂದರಿಂದ ಒಂದೂವರೆ ಗಂಟೆ ತೆರವುಗೊಳಿಸಲು ಆಗುವ ಸಾಧ್ಯತೆ ಇದೆ ಎಂಬುದಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ತಿಳಿಸಿದ್ದಾರೆ.

image descriptionಇದನ್ನೂ ಓದಿ >ಜೆಎನ್ಎನ್ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ್ಯಾಂಕಿಂಗ್ನಲ್ಲಿ 2ನೇ ಸ್ಥಾನ















