ಶಿವಮೊಗ್,: ಸೇನಾಧಿಕಾರಿಗಳು, ಸೇನಾ ನೇಮಕಾತಿ ಕಛೇರಿ, ಮಂಗಳೂರು ಇವರಿಂದ ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಬಯಸುವ ಆಸಕ್ತ ಯುವಕ/ಯುವತಿಯರಿಗಾಗಿ ಸೇನಾಪಡೆಗಳಲ್ಲಿ ಲಭ್ಯವಿರುವ ಸವಲತ್ತು-ಅವಕಾಶಗಳ ಕುರಿತ ಸಮಗ್ರ ಉಪನ್ಯಾಸವನ್ನು ಮಾ.06 ರಂದು ಬೆಳಿಗ್ಗೆ 10.30 ಕ್ಕೆ ಮಾಜಿ ಸೈನಿಕರ ಸಂಘಗಳ ಸಹಯೋಗದೊಂದಿಗೆ ಶ್ರೀ ಜಗದ್ಗುರು ಪಂಚಾಚಾರ್ಯ ಐ.ಟಿ.ಐ ಕಾಲೇಜು, ಬೈಪಾಸ್ ರಸ್ತೆ, ಶಿವಮೊಗ್ಗ ಹಾಗೂ ಮಧ್ಯಾಹ್ನ 2.00 ಕ್ಕೆ ಮತ್ತು ಮಾಜಿ ಸೈನಿಕರ ಕಲ್ಯಾಣ ಟ್ರಸ್ಟ್ ಇವರ ಸಹಯೋಗದೊಂದಿಗೆ ಎಲ್.ಬಿ.ಎಸ್. ಕಾಲೇಜ್, ಸಾಗರ ಇಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಆಸಕ್ತ ವಿದ್ಯಾರ್ಥಿಗಳು, ಯುವಕ/ಯುವತಿಯರು ಶೀಘ್ರದಲ್ಲಿಯೇ ಆರಂಭಗೊಳ್ಳಲಿರುವ ಸೇನಾ ನೇಮಕಾತಿ ಪ್ರಕ್ರಿಯೆ ಕುರಿತ ಈ ಉಚಿತ “ಮಾಹಿತಿ ಕಾರ್ಯಾಗಾರ” ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಯೋಜನವನ್ನು ಪಡೆಯುವಂತೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08182-220925 ಸಂಖ್ಯೆಗೆ ಕಛೇರಿ ವೇಳೆಯಲ್ಲಿ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ .
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com













