ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ರಾಮನಗರ ಮೂಲದ ವ್ಯಕ್ತಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿಯ ಮರಿಸ್ವಾಮಿ ಹೆಚ್.ಎಂ. ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > >ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್ !
ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛಗೊಳಿಸಲು ಇಂದು ಬೆಳಗ್ಗೆ ಸಿಬ್ಬಂದಿ ಹೋದಾಗ ಘಟನೆ ಗೊತ್ತಾಗಿದೆ.
ಮರಿಸ್ವಾಮಿ ಅವರು ತಾವು ಧರಿಸಿದ್ದ ಪ್ಯಾಂಟ್ ಬಳಸಿ ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ > > ಸಾಲಗಾರರ ಕಾಟಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!
ಸದ್ಯ ಮೃತದೇಹವನ್ನು ನಗರದ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














