ಶಿವಮೊಗ್ಗ: ನೀಟ್ ಯುಜಿ ಪರೀಕ್ಷೆಯಲ್ಲಿ ರಾಜಸ್ಥಾನ ಹಾಗೂ ಉತ್ತರಾಖಂಡ್’ನಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದಾಗಿರುವ ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದು ಮಾಡಲಾಗಿದ್ದು, ಹೊಸದಾಗಿ ನಡೆಯುವ ಪರೀಕ್ಷಾ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುತ್ತದೆ.
ನೀಟ್ 2026ರಲ್ಲಿ ಅಕ್ರಮ ನಡೆದಿರುವುದು ಪರೀಕ್ಷೆಯನ್ನೇ ರದ್ದು ಮಾಡಲಾಗಿದೆ. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ, ಸಂಸದರ ನಿವಾಸಕ್ಕೆ ಯುವ ಕಾಂಗ್ರೆಸ್ ನೂರಾರು ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಇದನ್ನೂ ಓದಿ > ಶಿವಮೊಗ್ಗ, ಗ್ರಾಮಸ್ಥರನ್ನು ಅಟ್ಟಿಸಿಕೊಂಡು ಬಂದ ಕಾಡಾನೆ, ವಿಡಿಯೋ ವೈರಲ್!
ಗ್ರಾಮೀಣ, ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ತಮ್ಮ ಕುಟುಂಬದ ಆರ್ಥಿಕ ಸಂಕಷ್ಟಗಳ ನಡುವೆಯೂ ವಿದ್ಯಾಭ್ಯಾಸಕ್ಕಾಗಿ ಹೋರಾಡುತ್ತಿರುವ ಸಂದರ್ಭದಲ್ಲಿ, ವೈದ್ಯಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ಕನಸು ಕಂಡು ಅನೇಕ ವರ್ಷಗಳ ಕಾಲ ಹಗಲು-ರಾತ್ರಿ ಪರಿಶ್ರಮಪಡುವ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನಲ್ಲದೇ ಪೋಷಕರ ನಂಬಿಕೆ ಮತ್ತು ವಿಶ್ವಾಸವನ್ನೇ ಹಾಳು ಮಾಡಿದ ಕೇಂದ್ರ ಬಿಜೆಪಿ ಸರ್ಕಾರ. ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಪ್ರಶ್ನೆ ಪತ್ರಿಕೆ ಪದೇ ಪದೇ ಸೋರಿಕೆಯಾಗುತ್ತಿರುವುದು ಯುವ ಕಾಂಗ್ರೆಸ್ ಖಂಡಿಸಿದೆ.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್, ರಾಜಸ್ಥಾನ್ ಮತ್ತು ಉತ್ತರಾಖಾಂಡ್ನಲ್ಲಿ ನಡೆದ ನೀಟ್ ಯುಜಿ-2026 ಪರೀಕ್ಷೆಯ ಕುರಿತು ಕೇಳಿಬಂದಿರುವ ಪ್ರಶ್ನೆ ಪತ್ರಿಕೆ ಸೋರಿಕೆಯ ವದಂತಿದೆ ಪುಷ್ಠಿ ಕೊಡುವಂತೆ 03 ಮೇ2026 ರಂದು ನಡೆದ ಪರೀಕ್ಷೆಯ ಅಕ್ರಮಗಳ ಆರೋಪಗಳು ಸರಿಯಾಗಿವೇ ಎಂಬಂತೆ ಮತ್ತು ಪಾರದರ್ಶಕತೆ ಕಾಪಾಡಲು ವಿಫಲವಾಗಿದೆ. ಅಲ್ಲದೇ, ಕೇಂದ್ರದ ಬಿಜೆಪಿ ಸರ್ಕಾರ ಪರೀಕ್ಷೆಯನ್ನೇ ರದ್ದು ಮಾಡಿದೆ ಎಂದು ಕಿಡಿ ಕಾರಿದರು.
ರಾಷ್ಟ್ರಮಟ್ಟದ ಪರೀಕ್ಷೆಯ ಭದ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಈ ಬೇಜಾವಬ್ದಾರಿ ಕೇಂದ್ರ ಸರ್ಕಾರವನ್ನು ಈ ಕೂಡಲೇ ವಜಾಗೊಳಿಸಿ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ ಮತ್ತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡುವಂತೆ ಮಾಡಲು ಈ ಮೂಲಕ ರಾಷ್ಟ್ರಪತಿಗಳಿಗೆ ಗೌರವಪೂರ್ವಕವಾಗಿ ಕೋರಿದರು.
ಇದನ್ನೂ ಓದಿ > ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ನಿಧನ, ಆಗಿದ್ದೇನು?
ಈ ಸಂದರ್ಭದಲ್ಲಿ ಅಜವಳಿ ನಿಗಮದ ಅಧ್ಯಕ್ಷರಾದ ಚೇತನ್, ಯುವ ಮುಖಂಡರಾದ ಮಧುಸೂಧನ್, ಮಹಾನಗರ ಪಾಲಿಕೆ ಮಾಜಿ ವಿರೋಧ ಪಕ್ಷದ ನಾಯಕಿ ಯಮನರಂಗೇಗೌಡ, ಯುವ ಕಾಂಗ್ರೆಸ್ಸಿನ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, ನಗರಾಧ್ಯಕ್ಷರಾದ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಅಬ್ದುಲ್ ಸತ್ತಾರ್, ಮಲವಗೊಪ್ಪ ಶಿವು, ಆಕಾಶ್, ಗಿರೀಶ್, ಸಕ್ಲೇನ್, ಅಶೋಕ್, ರವಿ, ವಿಷ್ಣು, ಬಾಬು, ತೌಫಿಕ್, ಮನೋಜ್, ಅನಂತ್ ಸೇರಿದಂತೆ ಹಲವರು ಇದ್ದರು. ಸಂಸದರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.















