• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ವಿಶೇಷ

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಒಳಮೀಸಲಾತಿ, ಪಡಿತರ ನಿಯಮಗಳ ಗೊಂದಲ – ಬೆಳಗ್ಗೆಯಿಂದಲೇ ಸರತಿ ಸಾಲು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 20, 2026
in ವಿಶೇಷ, ಶಿವಮೊಗ್ಗ
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕು ಕಛೇರಿಯ ಪಡಸಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕಾಣಿಸುತ್ತಿರುವ ದೃಶ್ಯ ಒಂದೇ ಮಾತಿನಲ್ಲಿ ಹೇಳಬೇಕಾದರೆ — ಜನವೋ… ಜನ..!. ಜಾತಿ ಹಾಗೂ ಆದಾಯ ಪ್ರಮಾಣಪತ್ರಕ್ಕಾಗಿ ಜನರು ಮುಗಿಬಿದ್ದು, ಬೆಳಗ್ಗೆ 9 ಗಂಟೆ ಹೊತ್ತಿಗೆಲೇ ಉದ್ದನೆಯ ಸರತಿ ಸಾಲುಗಳು ರೂಪುಗೊಳ್ಳುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ.

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ವ್ಯವಸ್ಥೆ, ಜೊತೆಗೆ ಪಡಿತರ ಮತ್ತು ಇತರೆ ಸರ್ಕಾರಿ ಯೋಜನೆಗಳ ಪ್ರಯೋಜನ ಪಡೆಯಲು ಹೊಸದಾಗಿ ಪ್ರಮಾಣಪತ್ರ ಸಲ್ಲಿಕೆ ಕಡ್ಡಾಯವಾಗಿರುವ ಹಿನ್ನೆಲೆಯಲ್ಲಿ ಜನರು ನಾಡಕಛೇರಿಗಳತ್ತ ಧಾವಿಸುತ್ತಿದ್ದಾರೆ. ಕೂಲಿ ಕಾರ್ಮಿಕರು, ಬಡವರು ತಮ್ಮ ದೈನಂದಿನ ಕೆಲಸಗಳನ್ನು ಬಿಟ್ಟು ಕಚೇರಿಗಳ ಮುಂದೆ ಗಂಟೆಗಳ ಕಾಲ ನಿಂತು ಕಾಯುತ್ತಿರುವುದು ಸಾಮಾಜಿಕ-ಆರ್ಥಿಕ ಸಂಕಷ್ಟವನ್ನು ತೆರೆದಿಡುತ್ತದೆ.

ಒಳಮೀಸಲಾತಿ, ಪಡಿತರ ನಿಯಮಗಳ ಗೊಂದಲ

ಒಳಮೀಸಲಾತಿಯ ಹೊಸ ನಿಯಮಗಳ ಪ್ರಕಾರ ಪರಿಶಿಷ್ಟ ಜಾತಿಯೊಳಗಿನ ವರ್ಗೀಕರಣವನ್ನು ಮರುಹಂಚಿಕೆ ಮಾಡಲಾಗಿದೆ. ಎಡಗೈ, ಬಲಗೈ ಸಮುದಾಯಗಳು ಹಾಗೂ ಲಂಬಾಣಿ, ಭೋವಿ ಸೇರಿದಂತೆ ಇತರೆ ಸಮುದಾಯಗಳಿಗೆ ಪ್ರತ್ಯೇಕ ಪ್ರವರ್ಗಗಳನ್ನು ನಿಗದಿಪಡಿಸಲಾಗಿದೆ. ಇದರ ಪರಿಣಾಮವಾಗಿ ಹಳೆಯ ಜಾತಿ ಪ್ರಮಾಣಪತ್ರಗಳು ಅನೇಕ ಸಂದರ್ಭಗಳಲ್ಲಿ ಅನರ್ಹವಾಗುತ್ತಿದ್ದು, ‘ಪ್ರವರ್ಗ ಎ’, ‘ಬಿ’, ‘ಸಿ’ ಎಂಬ ನವೀಕೃತ ವಿವರಗಳೊಂದಿಗೆ ಹೊಸ ಪ್ರಮಾಣಪತ್ರ ಪಡೆಯುವುದು ಅನಿವಾರ್ಯವಾಗಿದೆ.

ಶಾಲಾ–ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು ಹಾಗೂ ವಿವಿಧ ಯೋಜನೆಗಳ ಫಲಾನುಭವಿಗಳು ಈ ಪ್ರಮಾಣಪತ್ರಗಳಿಗಾಗಿ ಪಡಸಾಲೆ ಹಾಗೂ ನಾಡಕಛೇರಿಗಳ ಸುತ್ತ ಸುತ್ತುತ್ತಿದ್ದಾರೆ. ಶಿವಮೊಗ್ಗ ತಾಲ್ಲೂಕು ಕಛೇರಿಯಲ್ಲಿ ಅರ್ಜಿ ಸಲ್ಲಿಕೆಗೆ ಎರಡು ಕೌಂಟರ್‌ಗಳಿದ್ದರೂ, ಜನರ ಸಂಖ್ಯೆಗೆ ಅದು ಸಾಲುತ್ತಿಲ್ಲ. ಕಳೆದ ಒಂದು ವಾರದಿಂದ ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚುತ್ತಲೇ ಇದೆ.

“ಸರ್ವರ್ ಬ್ಯುಸಿ” ಎಂಬ ಸಂದೇಶ

ಸರ್ಕಾರ ಡಿಜಿಟಲ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರೂ, ನಾಡಕಛೇರಿ ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆಗಳು ಸಾಮಾನ್ಯವಾಗಿವೆ. “ಸರ್ವರ್ ಬ್ಯುಸಿ” ಎಂಬ ಸಂದೇಶ ಕಾಣಿಸಿಕೊಳ್ಳುವುದರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಕೂಡ ಜನರಿಗೆ ಸವಾಲಾಗಿದೆ. ಇದರ ಪರಿಣಾಮವಾಗಿ ಜನರು ಕಚೇರಿಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಜಿಲ್ಲಾಡಳಿತ ಗಮನಿಸದಿದ್ದರೆ ಜನರ ಉಗ್ರ ಪ್ರತಿಭಟನೆ!

ಇದಲ್ಲದೆ, ಪಡಿತರ ಪಡೆಯಲು ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯ ಎಂದು ಕೆಲವು ಪಡಿತರ ಅಂಗಡಿಗಳಲ್ಲಿ ತಿಳಿಸಲಾಗುತ್ತಿದೆ ಎಂಬ ಮಾತು ಜನರಲ್ಲಿ ಗೊಂದಲ ಹುಟ್ಟಿಸಿದೆ. ಸರ್ಕಾರದಿಂದ ಇದುವರೆಗೆ ಈ ಕುರಿತು ಸ್ಪಷ್ಟ ಆದೇಶ ಹೊರಬಂದಿಲ್ಲದಿದ್ದರೂ, ಜನರು ಆತಂಕದಿಂದ ಪ್ರಮಾಣಪತ್ರ ಪಡೆಯಲು ಓಡಾಡುತ್ತಿದ್ದಾರೆ.
ಬೆಳಗ್ಗೆ 6 ಗಂಟೆಯಿಂದಲೇ ಕಚೇರಿಗಳ ಮುಂದೆ ಸಾಲಿನಲ್ಲಿ ನಿಂತು ಕಾಯುತ್ತಿರುವ ಜನರ ಸ್ಥಿತಿ ಕಳವಳಕಾರಿಯಾಗಿದೆ. ದಿನಗೂಲಿ ಕೆಲಸಗಾರರು ತಮ್ಮ ಆದಾಯವನ್ನು ಕಳೆದುಕೊಂಡು ಕಚೇರಿಗಳ ಸುತ್ತಲೇ ತಿರುಗಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಜಿಲ್ಲಾಡಳಿತದ ಗಮನವನ್ನು ಸೆಳೆಯುತ್ತಿದ್ದು, ಸಮಸ್ಯೆಗೆ ತಕ್ಷಣ ಸ್ಪಷ್ಟನೆ ಮತ್ತು ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಡಿತರ ನಿಯಮಗಳ ಬಗ್ಗೆ ಗೊಂದಲ ನಿವಾರಣೆ, ಆನ್‌ಲೈನ್ ವ್ಯವಸ್ಥೆ ಸುಧಾರಣೆ ಹಾಗೂ ಹೆಚ್ಚುವರಿ ಕೌಂಟರ್‌ಗಳ ವ್ಯವಸ್ಥೆ ಮಾಡದಿದ್ದರೆ ಜನರ ಆಕ್ರೋಶ ಪ್ರತಿಭಟನೆಗೆ ತಿರುಗುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯೂ ಕೇಳಿಬರುತ್ತಿದೆ.

Tags: caste and income certificatesmalnad newspadasalePeople in the hallway of Shivamogga... people..! Queue since 9 amPeople's movement for caste and income certificatesshimogashivamoashivamoggaಶಿವಮೊಗ್ಗ
Previous Post

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

Next Post

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ 'ನ್ಯಾಯದೀಕ್ಷಾ' ಕಾರ್ಯಕ್ರಮ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL