ಶಿವಮೊಗ್ಗ : ಹಣಕಾಸಿನ ಅಭಾವದಿಂದ ತಮ್ಮ ಸ್ವಗ್ರಾಮಕ್ಕೆ ತೆರಳಲಾಗದೆ ಸಂಕಷ್ಟದಲ್ಲಿದ್ದ ಬಳ್ಳಾರಿ ಜಿಲ್ಲೆಯ ಬಡ ಕುಟುಂಬವೊಂದಕ್ಕೆ ಕಾರ್ಗಲ್ ಪೊಲೀಸರು ಸಾಥ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ > > ಸೋಮವಾರ ಶಿವಮೊಗ್ಗ ಜಿಲ್ಲೆಯ ಅಂಗನವಾಡಿ ಬಂದ್ ಗೆ ಕರೆ, ಕಾರಣವೇನು?
ಉದ್ಯೋಗ ಅರಸಿ ಶಿವಮೊಗ್ಗ ಜಿಲ್ಲೆಯ ಜೋಗಕ್ಕೆ ಬಂದಿದ್ದ ಈ ಕುಟುಂಬವು ಕಾಮಗಾರಿ ಮುಗಿದ ನಂತರ ಊರಿಗೆ ಮರಳಲು ಹಣವಿಲ್ಲದೆ ಪರದಾಡುತ್ತಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ತಕ್ಷಣ ಸ್ಪಂದಿಸಿದ ಕಾರ್ಗಲ್ ಹಾಗೂ ಜೋಗ ಪೊಲೀಸ್ ಸಿಬ್ಬಂದಿ, ಕುಟುಂಬದ ಪರಿಸ್ಥಿತಿಯನ್ನು ವಿಚಾರಿಸಿ ಪ್ರಯಾಣಕ್ಕಾಗಿ ಅಗತ್ಯ ಹಣಕಾಸಿನ ನೆರವು ನೀಡಿ ಊರಿಗೆ ಕಳುಹಿಸಿಕೊಟ್ಟರು.
ಇದನ್ನೂ ಓದಿ > > ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಅರ್ಧದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?
ಇದನ್ನೂ ಓದಿ > > ನಾಳೆ ವಸುದೇವ ಭೂಪಾಳಂ ಕವನಗಳ ಗಾಯನ, ವಾಚನ ಸ್ಪರ್ಧೆ
ಸಮಯಕ್ಕೆ ಸರಿಯಾಗಿ ನೆರವಾದ ಪೊಲೀಸರಿಗೆ ಕುಟುಂಬಸ್ಥರು ಕಣ್ಣೀರಿಡುತ್ತ ಕೃತಜ್ಞತೆ ಸಲ್ಲಿಸಿದ್ದಾರೆ.
ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.














