• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ ಬಂದ್‌, ಟ್ರ್ಯಾಕ್ಟರ್‌ಗಳ ರ್‍ಯಾಲಿ, ಹೇಗಿತ್ತು ಬಂದ್‌?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 29, 2026
in ಸಾಗರ, ಶಿವಮೊಗ್ಗ
ಸಾಗರ ಬಂದ್‌, ಟ್ರ್ಯಾಕ್ಟರ್‌ಗಳ ರ್‍ಯಾಲಿ, ಹೇಗಿತ್ತು ಬಂದ್‌?
Share on FacebookShare on TwitterShare on WhatsApp

ಸಾಗರ : ವಿದ್ಯುತ್ ಖಾಸಗೀಕರಣ ವಿರೋಧಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಶಿವಮೊಗ್ಗ ಜಿಲ್ಲಾ ಘಟಕ ನೀಡಿದ ಸಾಗರ ಬಂದ್ ಭಾಗಶಃ ಯಶಸ್ಸು ಕಂಡಿದೆ. ಸಾಗರ ಬಂದ್ ಹಿನ್ನೆಲೆಯಲ್ಲಿ ರೈತ ಸಂಘದ ಪ್ರಮುಖರು ಬೆಳಿಗ್ಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಅಂಗಡಿ ಮುಂಗಟ್ಟು, ಹೋಟೆಲ್ ಮಾಲೀಕರ ಬಳಿ ತಮ್ಮ ವಹಿವಾಟು ನಿಲ್ಲಿಸುವ ಮೂಲಕ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು. ಇನ್ನು ಕೆಲವರು ಬಂದ್ ಮಾಡಲು ನಿರಾಕರಿಸಿದಾಗ ರೈತರು ನಿಮ್ಮ ಅಂಗಡಿಗಳಲ್ಲಿ ಮುಂದಿನ ದಿನಗಳಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವುದಿಲ್ಲ ಎನ್ನುವ ಎಚ್ಚರಿಕೆ ಸಹ ನೀಡಿದ್ದು ಕಂಡು ಬಂದಿತು.

ಇದನ್ನೂ ಓದಿ > ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!

ನಗರದ ಪ್ರಮುಖ ಬೀದಿಗಳಲ್ಲಿ ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದರೇ, ಬಸ್ ಸೌಲಭ್ಯ, ಸರ್ಕಾರಿ ಕಚೇರಿ, ಬ್ಯಾಂಕ್, ಶಾಲಾಕಾಲೇಜು ಎಂದಿನಂತೆ ಕಾರ್ಯನಿರ್ವಹಿಸಿವೆ. ಸಾಗರದ ಮಹಾಗಣಪತಿ ದೇವಸ್ಥಾನದ ಬಳಿ ಮೆರವಣಿಗೆಗೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಆರ್. ಜಯಂತ್ ಹಸಿರು ಬಾವುಟ ತೋರಿಸುವ ಮೂಲಕ ಚಾಲನೆ ನೀಡಿದರು. ಪ್ರತಿಭಟನೆಯಲ್ಲಿ ಸಾವಿರಾರು ರೈತರು ಪಾಲ್ಗೊಂಡಿದ್ದರೇ, ಗ್ರಾಮೀಣ ಭಾಗದಿಂದ ರೈತರು ನೂರಾರು ಟ್ಯಾಕ್ಟರ್‌ಗಳಲ್ಲಿ ಆಗಮಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಮೆರವಣಿಗೆಯು ಗಣಪತಿ ದೇವಸ್ಥಾನದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಿರುವ ಸಂದರ್ಭದಲ್ಲಿ ಅಶೋಕ ರಸ್ತೆಯಲ್ಲಿದ್ದಾಗ ಭಾರೀ ಮಳೆ ಸುರಿದರೂ ಮಳೆಯ ನಡುವೆಯೂ ರೈತರು ವಿದ್ಯುತ್ ಖಾಸಗೀಕರಣದ ವಿರುದ್ದ ಘೋಷಣೆ ಕೂಗಿ, ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿ ಮನವಿ ಸಲ್ಲಿಸಿದರು.

ಇದನ್ನೂ ಓದಿ > ಸಿಇಟಿಯಲ್ಲಿ ಕಡಿಮೆ ಅಂಕ, ವಿಷ ಸೇವಿಸಿದ್ದ ಯುವಕ ಸಾವು!

ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಸದಸ್ಯ ಬಿ.ಆರ್.ಜಯಂತ್, ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗೀಕರಣದ ತೆಕ್ಕೆಗೆ ತಳ್ಳುವುದನ್ನು ನಾವು ಖಡಾಖಂಡಿತವಾಗಿ ವಿರೋಧಿಸಬೇಕು. ಈಗಾಗಲೆ ಕೇಂದ್ರ ಸರ್ಕಾರ ಬಿಎಸ್‌ಎನ್‌ಎಲ್ ಸೇರಿ ಅನೇಕ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಮುಂದಾಗಿದ್ದು, ಅಂತಹ ಸಂಸ್ಥೆಗಳು ವಿನಾಶದ ಅಂಚನ್ನು ತಲುಪಿದೆ. ಖಾಸಗೀಕರಣ ಜನವಿರೋಧಿ ಕೃತ್ಯ. ರಾಜ್ಯ ಸರ್ಕಾರ ಟಾಟಾ ಕಂಪನಿಗೆ ವಿದ್ಯುತ್ ಸಂಸ್ಥೆ ಮಾರುವುದನ್ನು ನಾವು ಉಗ್ರವಾಗಿ ಖಂಡಿಸಬೇಕು. ಸರ್ಕಾರ ಯಾವುದೇ ಆಗಿದ್ದರೂ ಜನವಿರೋಧಿನೀತಿ ಜಾರಿಗೆ ತಂದಾಗ ಎಲ್ಲರೂ ಖಂಡಿಸಬೇಕು. ಖಾಸಗಿ ಕಂಪನಿಗಳು ಜನಸಾಮಾನ್ಯರ ಹಿತವನ್ನು ಕಾಪಾಡುವುದಿಲ್ಲ. ಆದ್ದರಿಂದ ಮುಖ್ಯಮಂತ್ರಿಗಳು ಖಾಸಗೀಕರಣ ಮಾಡುವುದನ್ನು ಕೈಬಿಡಬೇಕು. ಖಾಸಗೀಕರಣದಿಂದ ಸರ್ಕಾರೀಕರಣವಾಗಬೇಕೆ ವಿನಃ, ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಡಾ. ರಾಮಚಂದ್ರಪ್ಪ ಮನೆಘಟ್ಟ, ಪ್ರಮುಖರಾದ ಬಿ.ಎ.ಇಂದೂಧರ ಬೇಸೂರು, ಕುಂಟಗೋಡು ಸೀತಾರಾಮ್, ವ.ಶಂ.ರಾಮಚಂದ್ರ ಭಟ್,ಕುಮಾರಸ್ವಾಮಿ ಕೊಪ್ಪ, ಹನುಮಂತಪ್ಪ, ಹಿತಕರ ಜೈನ್, ಜಮೀಲ್ ಸಾಗರ್, ಸಂತೋಷ್, ಚಂದ್ರು ಪೂಜಾರಿ, ಶಿವು ಮೈಲಾರಿಕೊಪ್ಪ, ರಾಚಪ್ಪ, ಸೋಮಶೇಖರ್, ಉಮೇಶ್ ಪಾಟೀಲ್, ಮಂಜುನಾಥ್ ಇನ್ನಿತರರು ಹಾಜರಿದ್ದರು.

Tags: How was the bandh?kannada news livelatest newsmalnad newsSagar BandhshimogashivamoggaTractor Rallyಶಿವಮೊಗ್ಗ
Previous Post

ಆಲ್ಕೊಳ ಬಳಿ ಚರಂಡಿಯಲ್ಲಿ ಬೃಹತ್ ಹೆಬ್ಬಾವು ಪತ್ತೆ

Next Post

ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?

ನಂಬರ್ ಪ್ಲೇಟ್ ಇಲ್ಲದ 74 ದ್ವಿಚಕ್ರ ವಾಹನಗಳು ವಶಕ್ಕೆ, ಎಸ್ಪಿ ನಿಖಿಲ್ ಅವರ ಎಚ್ಚರಿಕೆ ಏನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL