ಶಿವಮೊಗ್ಗ : ಅಪರೂಪದ ಆಟೋ ಇಮ್ಯೂನ್ (ನರ ಮತ್ತು ಸ್ನಾಯು ಸಂಬಂಧಿ) ಕಾಯಿಲೆಗೆ ಸಂಕೀರ್ಣ ಶಸ್ತ್ರ ಚಿಕಿತ್ಸೆಯನ್ನು ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ವೈದ್ಯರ ತಂಡ ನಡೆಸಿ 48 ವರ್ಷದ ರೋಗಿಯನ್ನು ಉಸಿರಾಟದ ವೈಫಲ್ಯದ ಅಂಚಿನಿಂದ ಪಾರು ಮಾಡುವಲ್ಲಿ ಯಶಸ್ವಿಯಾಗಿ ರೋಗಿಗೆ ಮರುಜೀವ ನೀಡಿದೆ.
ಇದನ್ನೂ ಓದಿ – ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?
ಇಂದು ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮೆದುಳು ಮತ್ತು ನರರೋಗ ತಜ್ಞೆ ಡಾ. ಹಂಸಾ ಕೆ.ಎಂ. ಮಾತನಾಡಿ, ಸ್ನಾಯುಗಳ ದೌರ್ಬಲ್ಯ ಮತ್ತು ವಿಪರೀತ ಆಯಾಸದ ಸಮಸ್ಯೆಯೊಂದಿಗೆ ರೋಗಿ ಮೊದಲು ನ್ಯೂರಾಲಜಿಯಾಗಿ ಹೊರರೋಗಿ ವಿಭಾಗಕ್ಕೆ ಬಂದಿದ್ದು, ತಪಾಸಣೆ ನಡೆಸಿದ ವೈದ್ಯರು ಮೈಯಾಸ್ಕೇನಿಯಾ ಗ್ರಾವಿಸ್ ಇರುವುದು ದೃಢಪಟ್ಟಿತು. ಹೆಚ್ಚಿನ ಸ್ಕ್ಯಾನಿಂಗ್ ನಡೆಸಿದಾಗ ಅವರ ಎದೆಯ ಭಾಗದಲ್ಲಿ 12 ಸೆಂ.ಮೀ.ಗೂ ಉದ್ದದ ಗಡ್ಡೆ ಕಂಡು ಬಂದಿತು. ಮೊದಲಿಗೆ ಔಷಧಗಳ ಮೂಲಕ ರೋಗಿಯನ್ನು ಸ್ಥಿರಗೊಳಿಸಿದ ನಂತರ ಯಶಸ್ವಿಯಾಗಿ ಥೈಮೆಕೃಮಿ ಮಾಡಲಾಯಿತು. ಎದೆಯ ಎಲುಬಿನ ಹಿಂಭಾಗದಲ್ಲಿ ಥೈಮಸ್ ಗ್ರಂಥಿಯನ್ನು ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಬಾಲಸುಬ್ರಮಣಿ ಆರ್. ಸಂಕಿರಣ ಶಸ್ತ್ರ ಚಿಕಿತ್ಸೆ ನೆರವೇರಿಸಿದರು.
ಇದನ್ನೂ ಓದಿ –ತೀರ್ಥಹಳ್ಳಿ, ಪೊಲೀಸ್ ಗೌರವದೊಂದಿಗೆ ಆರ್ಎಸ್ಐ ಅಂತ್ಯಕ್ರಿಯೆ
ನಂತರ ರೋಗಿ ಮೈಯಾಸೈನಿಕ್ ಕ್ರೈಸಿಸ್ಗೆ ತುತ್ತಾಗಿ ಉಸಿರಾಟದ ಸ್ನಾಯುಗಳು ತೀವ್ರವಾಗಿ ದುರ್ಬಲಗೊಂಡವು. ತಕ್ಷಣವೇ ಚಿಕಿತ್ಸೆ ನೀಡದಿದ್ದರೆ ಪ್ರಾಣಕ್ಕೆ ತುತ್ತು ತರುವಂತಹ ಉಸಿರಾಟ ವೈಫಲ್ಯದ ಸ್ಥಿತಿ ಎದುರಾಯಿತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತು ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ವ್ಯಕ್ತಿಯ ಪ್ರಾಣ ಉಳಿಸಿದೆ ಎಂದರು.
ಈ ಸಂಘಟಿತ ಪ್ರಯತ್ನಕ್ಕೆ ಫಲ ಸಿಕ್ಕು ಮೂರು ಸುತ್ತಿನ ಪ್ಲಾಸ್ಮಾಫೆರೆಸಿಸ್ ಮತ್ತು ತೀವ್ರ ಘಟಕದ ಆರೈಕೆ ನಂತರ ಉಸಿರಾಟದ ಶಕ್ತಿ ಮರುಳಿತು. ನಾಲ್ಕು ದಿನದಂದು ರೋಗಿಯನ್ನು ವೆಂಟಿಲೇಟರ್ನಿಂದ ಹೊರತೆಗೆಯಲಾಯಿತು. 5ನೇ ದಿನದಂದು ವಾರ್ಡ್ಗೆ ಸ್ಥಳಾಂತರಿಸಿ ನಂತರ ಸುಸ್ಥಿತಿಯಲ್ಲಿ ಡಿಸಾರ್ಜ್ ಮಾಡಲಯಿತು ಎಂದರು.
ತೀವ್ರ ನಿಗಾಘಟಕದ ವೈದ್ಯ ಡಾ.ದೀಪಕ್ ಶೆಟ್ಟಿ ಮಾತನಾಡಿ, ಅತ್ಯಂತ ಸಂಕೀರ್ಣ ವೈದ್ಯಕೀಯ ಸವಾಲುಗಳನ್ನು ನಿಖರತೆ ಮತ್ತು ಕಾಳಜಿಯಿಂದ ನಿಭಾಯಿಸಲು ಬದ್ಧರಾಗಿದ್ದು, ತಕ್ಷಣದ ಮತ್ತು ಉನ್ನತ ಮಟ್ಟದ ಚಿಕಿತ್ಸೆ ಅಗತ್ಯವಿರುವ ಮೈಯಾಸೈಸಿಯಾ ಗ್ರಾವಿಸ್ ಪ್ರಕರಣಗಳನ್ನು ನಿರ್ವಹಿಸುವ ನಮ್ಮ ಸಾಮಥ್ರ್ಯಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಭಾಗದಲ್ಲಿ ಸುಧಾರಿತ ನರರೋಗ ಚಿಕಿತ್ಸೆಗೆ ನಮ್ಮ ಆಸ್ಪತ್ರೆ ಪ್ರಮುಖ ಕಾರಣವಾಗಿದೆ ಎಂಬುದನ್ನು ಇದು ಸಾಬೀತುಪಡಿಸಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ಮಾರ್ಕೆಟಿಂಗ್ ಮ್ಯಾನೇಜರ್ ಶೈಲೇಶ್ ಎಸ್.ಎನ್., ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾದ ರೋಗಿ ಹಾಗೂ ಅವರ ಕುಟುಂಬ ಉಪಸ್ಥಿತರಿದ್ದರು.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














