ಶಿವಮೊಗ್ಗ : ರಾಜ್ಯದಲ್ಲಿನ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಹರಿಜನ ಮತ್ತು ಗಿರಿಜನ ಫಲಾನುಭವಿಗಳು ತಮ್ಮ ಜಾತಿ ಪ್ರಮಾಣ ಪತ್ರವನ್ನು ಆಯಾ ನ್ಯಾಯಬೆಲೆ ಅಂಗಡಿಗಳಿಗೆ ನೀಡಿ ಮ್ಯಾಪಿಂಗ್ ಮಾಡಿಸಬೇಕೆಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಸಾರ್ಕರದ ಕಾರ್ಯದರ್ಶಿಗಳು ಹೊರಡಿಸಿರುವ ಸುತ್ತೊಲೆಯಿಂದ ಎಸ್ಸಿ, ಎಸ್ಟಿ, ಬಿಪಿಎಲ್ ಫಲಾನುಭವಿಗಳು ಆತಂಕಕ್ಕೆ ಒಳಾಗಿದ್ದು, ಕೂಡಲೇ ಈ ಸುತ್ತೋಲೆಯನ್ನು ವಾಪಾಸ್ ಪಡೆಯಬೇಕೆಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.
ಇದನ್ನೂ ಓದಿ > ಎರಡು ಕಾರುಗಳ ನಡುವೆ ಭೀಕರ ಅಪಘಾತ, ವಾಹನಗಳು ಜಖಂ!
ಆಹಾರ ಇಲಾಖೆಯ ಮೇಲಾಧಿಕಾರಿಗಳ ಎಡಬಿಡಂಗಿ ನಿರ್ದೇಶನದಿಂದಾಗಿ ಫಲಾನುಭವಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ನೀಡಬೇಕೆಂದು ನ್ಯಾಯ ಬೆಲೆ ಅಂಗಡಿಗಳ ಮಾಲೀಕರು ಒತ್ತಾಯ ಮಾಡುತ್ತಿದ್ದಾರೆಂದು ಆರೋಪಿಸಿದರು.
ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಎಸ್ಸಿ ಎಸ್ಟಿ ಫಲಾನುಭವಿಗಳು ಆಯಾ ತಾಲ್ಲೂಕು ಮತ್ತು ನಾಡಾ ಕಚೇರಿಗೆ ಜಾತಿ ಪ್ರಮಾಣ ಪತ್ರ ಮಾಡಿಸಲು ಬೆಳಿಗ್ಗೆ ಯಿಂದ ಸಂಜೆಯವರೆಗೆ ಅಲೆಯುವಂತಾಗಿದೆ ಎಂದರು.
ಜಾತಿ ಪ್ರಮಾಣ ಪತ್ರ ಮಾಡಿಸಿ ಕೊಡದೆ ಹೋದರೆ ಫಲಾನುಭವಿಗಳಿಗೆ ನೀಡುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸ್ಥಗೀತಗೊಳ್ಳಬಹುದು ಎಂಬ ಆತಂಕದಲ್ಲಿ ಫಲಾನುಭವಿಗಳು ಜಾತಿ ಪ್ರಮಾಣ ಪತ್ರಕ್ಕಾಗಿ ಕಚೇರಿಗೆ ಅಲೆಯುತ್ತಿದ್ದಾರೆ. ಆದರಿಂದ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ > ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?
ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಹೆಚ್.ಎಂ.ಸಂಗಯ್ಯ, ಶಂಕ್ರನಾಯ್ಕ, ಎಲ್.ಆದಿಶೇಷ, ಚಂದ್ರಪ್ಪ, ಅಲೀಂ ಖಾನ್ ಇದ್ದರು.













