ಶಿವಮೊಗ್ಗ: ಶಾದಿಮಹಲ್ಗಳಲ್ಲಿ ನಡೆಯುತ್ತಿದ್ದ ಸರಣಿ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ತುಂಗಾ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಮದುವೆ ಸಮಾರಂಭಗಳಲ್ಲೇ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ರುಕ್ಸಾರ್ ಫಿರ್ದೋಸ್ (30) ಎಂಬ ಮಹಿಳೆಯನ್ನು ಮಾರ್ಚ್ 7ರಂದು ವಶಕ್ಕೆ ಪಡೆಯಲಾಯಿತು. ಸೂಳೆಬೈಲು ನಿವಾಸಿಯಾದ ಈಕೆ ಮದುವೆ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದಳು. ಬಂಧಿತ ಮಹಿಳೆಯಿಂದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಒಟ್ಟು 4 ಪ್ರಕರಣಗಳಿಗೆ ಸಂಬಂಧಿಸಿದಂತೆ 120 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಸುಮಾರು 18,00,000 ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಹೊಳಲೂರು ಬಳಿ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಸ್ಥಳದಲ್ಲೇ ಸಾವು
ತುಂಗಾನಗರ ಪೊಲೀಸ್ ಇನ್ಸ್ಪೆಕ್ಟರ್ ಕೆ.ಟಿ. ಗುರುರಾಜ್ ಮತ್ತು ಪಿಎಸ್ಐ ಗಾದಿಲಿಂಗಪ್ಪ ಗೌಡರ್ ಅವರ ನೇತೃತ್ವದಲ್ಲಿ ಹೆಚ್.ಸಿ.ಗಳಾದ ಕಿರಣ್ ಮೋರೆ, ಅರುಣ್ ಕುಮಾರ್, ಶೋಭಾರಾಣಿ, ಸಿಬ್ಬಂದಿ ನಾಗಪ್ಪ ಅಡಿವೆಪ್ಪನವರ್, ಹರೀಶ್ ನಾಯ್ಕ, ಹರೀಶ್, ರಂಗನಾಥ್ ಮತ್ತು ತಮ್ಮಣ್ಣ ಜಂಬಗಿ ಅವರ ತಂಡ ಆರೋಪಿಯನ್ನು ಬಂಧಿಸಿದೆ.
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














