ಶಿವಮೊಗ್ಗ: ನಮ್ಮೂರ ಬಳಗದ ವತಿಯಿಂದ ಭಾರತೀಯ ಧಾರ್ಮಿಕ ಸುಧಾರಕರು ಮತ್ತು ಆಧ್ಯಾತ್ಮಿಕ ನಾಯಕರು ಅಹಿಂಸಾ ಧರ್ಮ ಪ್ರತಿಪಾದಕರಾದ ಭಗವಾನ್ ಶ್ರೀ ಮಹಾವೀರ ಜಯಂತಿಯನ್ನು ಆಚರಿಸಲಾಯಿತು.
ಇದನ್ನೂ ಓದಿ > ಶಿವಮೊಗ್ಗದ ವಾಹನ ಸವಾರರಿಗೆ ಪೊಲೀಸ್ ಇಲಾಖೆಯ ಮಹತ್ವದ ಪ್ರಕಟಣೆ ಏನು?
ಈ ಸಂದರ್ಭದಲ್ಲಿ ನಮ್ಮೂರ ಬಳಗದ ಪ್ರಧಾನ ಸಂಚಾಲಕ ಕೆ ರಂಗನಾಥ್ ಮಾತನಾಡಿ, ಭಗವಾನ್ ಮಹಾವೀರರು ಜೈನ ಧರ್ಮದ 24ನೇ ತೀರ್ಥಂಕರಾಗಿ ಇಡೀ ಜಗತ್ತಿಗೆ ಅಹಿಂಸಾ ಧರ್ಮವನ್ನು ಪ್ರತಿಪಾದಿಸುತ್ತ ಎಲ್ಲರೂ ಸಹಬಾಳ್ವೆ, ಸಹಕಾರ ಸೇವಾಮನೋಭಾವದ ಜೀವನವನ್ನು ನಡೆಸಬೇಕೆಂದು ಸಾರಿದರು. ಇಂತಹ ಮಹಾನ್ ದಾರ್ಶನಿಕರ ಜೀವನ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಉತ್ತಮ ಸಮಾಜದ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಈ ಸಂದರ್ಭದಲ್ಲಿ ನಮ್ಮೂರ ಬಳಗದ ಗೌರವ ಸಂಚಾಲಕ ಸಿ ರವಿ, ಸಂಚಾಲಕರುಗಳಾದ ಕೆ ಆರ್ ಸುರೇಶ್, ಹೆಚ್.ಪಿ. ಗಿರೀಶ್, ಮದನ್ ಸಿಂಗ್, ಮಹೇಂದ್ರ ಜೈನ್, ರಾಜೇಶ್ ಮಂದಾರ, ಆಚಾರಿ ಗೋಪಿ, ಟಿ ಗುರುಪ್ರಸಾದ್, ಕೆ ಎಲ್ ಪವನ್, ರಜನಿಕಾಂತ್, ಆರ್ ಕಿರಣ್, ಕೇಬಲ್ ಲೋಕೇಶ್, ಜಯಪ್ರಕಾಶ್, ಸುಬ್ರಮಣಿ, ನಂದನ್, ಶ್ರೀಕಾಂತ್, ರಾಘವೇಂದ್ರ, ಮನ್ವಿಕ್ ಜೈನ್ ಇತರರು ಉಪಸ್ಥಿತರಿದ್ದರು.














