ಶಿವಮೊಗ್ಗ : ಶಿವಮೊಗ್ಗ ನಗರ ಉಪವಿಭಾಗ 1, ಘಟಕ -2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರವು ಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ. 29 ಮತ್ತು 30 ರಂದು ಬೆಳಗ್ಗೆ 10.00 ರಿಂದ ಮ. 2.00 ರವರೆಗೆ ಅಚ್ಯುತರಾವ್ ಲೇಔಟ್, ವೆಂಕಟೇಶನಗರ, ಗಾಂಧೀನಗರ, ಚನ್ನಪ್ಪ ಲೇಔಟ್, ಜೈಲ್ ರಸ್ತೆ, ಕುವೆಂಪು ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.













