ತೀರ್ಥಹಳ್ಳಿ: ಹಳೆಯ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ ವಿಷ ಬೆರೆಸಿರುವ ಘಟನೆ ತಾಲ್ಲೂಕಿನ ಗಿಣಿಯ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿಯೊಬ್ಬರು ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಇಲ್ಲಿವರೆಗೂ ಎಲ್ಲೇಲ್ಲಿ ಏನೇನಾಯ್ತು?
ಮಂಗಳವಾರ ಸಂಜೆ ಗ್ರಾಮದ ನಿವಾಸಿ ರಾಘವೇಂದ್ರ ಅವರು ಬಾವಿಯ ಬಳಿ ಹೋಗಿದ್ದಾಗ, ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ಪತ್ತೆಯಾಗಿದೆ. ಜಮೀನು ವಿವಾದದ ಹಿನ್ನೆಲೆ ವಿಷ ಬೆರೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














