ಹೊಸನಗರ: ಹುಲಿಕಲ್ ಘಾಟಿಯಲ್ಲಿ ನಿನ್ನೆ ಸಂಜೆ ರಸ್ತೆ ಅಂಚಿನ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವಾಗ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವುಕಂಡಿರುವ ಘಟನೆ ವರದಿಯಾಗಿದೆ.
ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು,ಹಾವೇರಿ ಜಿಲ್ಲೆಯ ನೆಲಗಲ್ಲು ಗ್ರಾಮದ ಶಬ್ಬೀರ್,ರಾಜು ಎಂದು ಗುರುತಿಸಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ನ್ಯೂಮಂಡ್ಲಿ ಸಾಮಿಲ್ಗೆ ಬೆಂಕಿ, ಮರದ ತುಂಡುಗಳು ಭಸ್ಮ!
ಕೆಲಸದಲ್ಲಿ ನಿರತರಾಗಿದ್ದ ಇತರ ನಾಲ್ವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುಲಿಕಲ್ ಘಾಟಿಯ ಚಂಡಿಕಾಂಬಾ ದೇವಸ್ಥಾನದ ಸಮೀಪದ ಹೇರ್ಪಿನ್ ತಿರುವಿನ ಬಳಿ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗ ಇದ್ದಕ್ಕಿದ್ದಂತೆಯೇ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಪರಿಣಾಮ ಈ ಅವಘಡ ಸಂಭವಿಸಿದೆ. ಮಣ್ಣಿನ ಅಂಚಿನಲ್ಲಿ ಇನ್ನೂ ಯಾರಾದರೂ ಸಿಲುಕಿರಬಹುದೇ ಎಂಬುದನ್ನು ಅರಿಯಲು ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಇದನ್ನೂ ಓದಿ > ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 6ನೇ ತರಗತಿ ಬಾಲಕಿ
ನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.














