ಶಿವಮೊಗ್ಗ : ಶಿವಮೊಗ್ಗದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಸಕ್ರೆಬೈಲು ಆನೆ ಬಿಡಾರಕ್ಕೆ #SakrebailElephantCamp ನಾಳೆಯಿಂದ ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಕೊಡಗಿನ ದುಬಾರೆ ಆನೆ ಬಿಡಾರದಲ್ಲಿ ಆನೆಗಳ ನಡುವಿನ ಗುದ್ದಾಟದ ಸಂದರ್ಭದಲ್ಲಿ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಯು, ಆನೆ ಬಿಡಾರಗಳಲ್ಲಿ ಕಟ್ಟುನಿಟ್ಟಿನ ಎಸ್ಒಪಿ ನಿಯಮಗಳನ್ನು ಜಾರಿಗೆ ತರುವಂತೆ ಅಧಿಕಾರಿಗಳಿಗೆ ಸೂಚಿಸಿದೆ.
ಸಕ್ರೆಬೈಲಿಗೂ ಸಹ ವಿವಿಧೆಡೆಯಿಂದ ಆನೆಗಳನ್ನು #Elephant ನೋಡಲು ಅಪಾರ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ. ಅಲ್ಲದೆ ಆನೆಗಳಿಗೆ ಸ್ನಾನ ಮಾಡಿಸುವುದು ಮತ್ತು ಅವುಗಳನ್ನು ಮುಟ್ಟುವುದು ಮಾಡುತ್ತಾರೆ. ದುಬಾರೆಯಲ್ಲಿ ನಡೆದಂತಹ ಅಹಿತಕರ ಘಟನೆಗಳು ಇಲ್ಲಿ ಮರುಕಳಿಸಬಾರದು ಎಂಬ ಮುನ್ನೆಚ್ಚರಿಕೆಯಿಂದ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಹೊಸ ಎಸ್ಒಪಿ #SOP ನಿಯಮಗಳು ಸಂಪೂರ್ಣವಾಗಿ ಜಾರಿಗೆ ಬರುವವರೆಗೂ ಸಕ್ರೆಬೈಲು ಆನೆ ಬಿಡಾರವು ಮುಚ್ಚಿರಲಿದೆ.
ಇದನ್ನೂ ಓದಿ > ಶಿವಮೊಗ್ಗ, ಮಂಗಳವಾರವೂ ಹುಲಿ-ಸಿಂಹಧಾಮ ವೀಕ್ಷಣೆಗೆ ಅವಕಾಶ
ಸಕ್ರೆಬೈಲು ಆನೆ ಬಿಡಾರದಲ್ಲಿ ಈ ಹಿಂದೆ ಆನೆಗಳಿಗೆ ಸಾರ್ವಜನಿಕರು ಸ್ನಾನ ಮಾಡಿಸುವ ಅವಕಾಶ ಇತ್ತು. ದುಬಾರೆ ಆನೆ ಬಿಡಾರದ ದುರಂತದ ನಂತರ ಆನೆಗಳಿಗೆ ಸ್ನಾನ ಮಾಡಿಸುವ ವ್ಯವಸ್ಥೆ ಬಂದ್ ಮಾಡಲಾಗಿದೆ.
ಸದ್ಯ ಸಕ್ರೆಬೈಲು ಆನೆ ಬಿಡಾರದಲ್ಲಿ 24 ಆನೆಗಳು ಇವೆ. 19 ಗಂಡು ಆನೆಗಳು 5 ಹೆಣ್ಣು ಆನೆಗಳು ಆನೆ ಬಿಡಾರದಲ್ಲಿ ಇವೆ. ಆನೆಗಳಿಗೆ ಸ್ನಾನ ಮಾಡಿಸುವ ಜಾಗದಿಂದ 50 ಮೀಟರ್ ದೂರದಲ್ಲಿ ಆನೆಗಳನ್ನು ವೀಕ್ಷಣೆ ಮಾಡಲು ಅವಕಾಶ ಮಾಡಿಕೊಡಲಾಗಿದೆ. ಹತ್ತಕ್ಕೂ ಹೆಚ್ಚು ಆನೆಗಳ ದಂತಗಳನ್ನು ಟ್ರಿಮ್ ಮಾಡಲು ನಿರ್ಧಾರ ಮಾಡಲಾಗಿದೆ.
ಇದನ್ನೂ ಓದಿ > ಅಧಿಕ ಲಾಭದ ಆಮಿಷ, ಟೈಲರ್ ಕುಟುಂಬಕ್ಕೆ ಲಕ್ಷಾಂತರ ರೂ ವಂಚನೆ!
ಸಕ್ರೆಬೈಲು ಆನೆ ಬಿಡಾರವು ಇಂದಿನಿಂದಲೇ ಮುಚ್ಚಬೇಕಿತ್ತು. ಆದರೆ ಇಂದು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದರಿಂದ ಅವರಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ ನಾಳೆಯಿಂದ ಕೆಲ ದಿನಗಳ ಕಾಲ ಇದು ಬಂದ್ ಆಗಿರಲಿದೆ.















