ಶಿವಮೊಗ್ಗ: ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಬುಧವಾರ ( ಇಂದು ಮದ್ಯಾಹ್ನ) ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ > ಅಕ್ರಮವಾಗಿ ಸಾಗಿಸುತ್ತಿದ್ದ ಕರುಗಳು ಸೇರಿ 10 ಗೋವುಗಳ ರಕ್ಷಣೆ
ಉಷಾ ನರ್ಸಿಂಗ್ ಹೋಂ ಸರ್ಕಲ್ ಕಡೆಯಿಂದ ತೆರಳುತ್ತಿದ್ದ ಕಾರು ರೋಟರಿ ರಕ್ತನಿಧಿ ಸಮೀಪ ಮಹಿಳೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಹಿಳೆಯ ಎಡಗಾಲಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. ಮಹಿಳೆಗೆ ಡಿಕ್ಕಿ ಹೊಡೆದು ನಂತರ ಫುಟ್ಪಾತ್ನ ರೇಲಿಂಗ್ ಗೆ ಅಪ್ಪಳಿಸಿದೆ. ಇದರಿಂದ ರೇಲಿಂಗ್ ಕೂಡ ಹಾನಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿ ಕಾಲೇಜು ವಿದ್ಯಾರ್ಥಿಗಳಷ್ಟೆ ಇದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ > ಜೂನ್ 20 ರಂದು ಉದ್ಯೋಗ ನೇರ ಸಂದರ್ಶನ
ಇನ್ನು, ಇದೇ ಮಾರ್ಗದಲ್ಲಿ ಚಲಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಅವರು ತಕ್ಷಣವೇ ತಮ್ಮ ಕಾರನ್ನು ನಿಲ್ಲಿಸಿ, ಗಾಯಾಳುವಿನ ನೆರವಿಗೆ ಧಾವಿಸಿದ್ದಾರೆ. ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ.
ಪೂರ್ವ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.













