ಶಿವಮೊಗ್ಗ : ಮನೆಯಲ್ಲಿ ತಂದೆ-ತಾಯಿಯ ಭೇದಭಾವದಿಂದ ಮನನೊಂದು ತುಂಗಾ ನದಿಗೆ ಹಾರಲು ಯತ್ನಿಸಿದ 16 ವರ್ಷದ ಬಾಲಕನನ್ನು ಪೊಲೀಸರು ರಕ್ಷಿಸಿದ ಘಟನೆ ನಗರದ ವಾದಿ-ಎ-ಹುದಾ ಸೇತುವೆ ಬಳಿ ನಡೆದಿದೆ.
ಇದನ್ನೂ ಓದಿ > ಶಿವಮೊಗ್ಗ, ‘ಶ್ರೀಕಾಂತಣ್ಣ ಕಪ್’ ಮುಡಿಗೇರಿಸಿಕೊಂಡ ವೀರಶೈವ ತಂಡ
ಊರಗಡೂರು ಸರ್ಕಲ್ನಲ್ಲಿ ಮಾ.29ರಂದು ರಾತ್ರಿ ಇಆರ್ಎಸ್ಎಸ್ (ತುರ್ತು ಸ್ಪಂದನಾ ವಾಹನ) ಗಸ್ತಿನಲ್ಲಿದ್ದಾಗ ಬಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸುತ್ತಿರುವ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದರು.
ಕಾರ್ಯಪ್ರವೃತ್ತರಾದ ಇಆರ್ವಿ ವಾಹನದ ರೆಸ್ಪಾಂಡರ್, ತುಂಗಾನಗರ ಠಾಣೆಯ ಸಿ.ಎಚ್.ಸಿ ಶಬ್ಬೀರ್ ಬೇಗ್ ಮತ್ತು ಡಿಎಆರ್ ಶಿವಮೊಗ್ಗದ ಚಾಲಕ ಮಂಜುನಾಥ್ ಎ.ಎಚ್.ಸಿ ಸ್ಥಳಕ್ಕೆ ಧಾವಿಸಿದ್ದಾರೆ. ನದಿಗೆ ಹಾರಲು ಸಿದ್ಧನಾಗಿದ್ದ ಬಾಲಕನನ್ನು ಸಾರ್ವಜನಿಕರ ನೆರವಿನಿಂದ ರಕ್ಷಿಸಿದ್ದಾರೆ. ನಂತರ ಆತನನ್ನು ಸಮಾಧಾನಪಡಿಸಿ, ಸೂಕ್ತ ತಿಳಿವಳಿಕೆ ನೀಡಿದ ಪೊಲೀಸರು, ಪೋಷಕರನ್ನು ಸ್ಥಳಕ್ಕೆ ಕರೆಸಿ ಮನೆಗೆ ಕಳುಹಿಸಿ ಕೊಟ್ಟಿದ್ದಾರೆ.
ಇದನ್ನೂ ಓದಿ > ಭದ್ರಾವತಿ, ಸೇತುವೆಯಿಂದ ಉರುಳಿಬಿದ್ದ ಬಸ್, ಹಲವರಿಗೆ ಗಾಯ!














