ಸಾಗರ: ತಾಲೂಕಿನ ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶರಾವತಿ ನದಿ ತೀರದ ನಿವಾಸಿಗಳು ಮತ್ತು ಸ್ಥಳೀಯರು ಭರ್ಜರಿಯಾಗಿ ಸಂಭ್ರಮಾಚರಣೆ ನಡೆಸಿದ್ದಾರೆ. ನಿನ್ನೆ ರಾತ್ರಿ ಸೇತುವೆಯ ಮೇಲೆ ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ಸ್ಥಳೀಯರು, ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದರು.
ಇದನ್ನೂ ಓದಿ > > ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ
ಕಳೆದ ವರ್ಷ 2025ರ ಜುಲೈ 14 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಉದ್ಘಾಟಿಸಿದ್ದ ಈ ಸಿಗಂದೂರು ಸೇತುವೆಯು, ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಇದನ್ನೂ ಓದಿ > > ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ
ದ್ವೀಪ ನಿವಾಸಿಗಳ ಬಹುಕಾಲದ ಕನಸನ್ನು ನನಸು ಮಾಡಿ, ಅವರನ್ನು ಮುಖ್ಯಭೂಮಿಗೆ ಬೆಸೆದ ಈ ಐತಿಹಾಸಿಕ ಕಾರ್ಯಕ್ಕಾಗಿ ಶರಾವತಿ ಎಡದಂಡೆಯ ಭಾಗದ ಜನರು ಕೇಂದ್ರ ಸರ್ಕಾರಕ್ಕೆ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ














